ರಣಜಿ ಟ್ರೋಫಿಯಲ್ಲೂ ರೋಹಿತ್ ಶರ್ಮಾ ಹುಳುಕು ಬಟಾಬಯಲು, ಚಾಂಪಿಯನ್ಸ್ ಟ್ರೋಫಿಯಲ್ಲಿ ಏನು ಕತೆಯೋ

Krishnaveni K
ಗುರುವಾರ, 23 ಜನವರಿ 2025 (13:24 IST)
Photo Credit: X
ಮುಂಬೈ: ಕಳಪೆ ಫಾರ್ಮ್ ನಲ್ಲಿರುವ ಟೀಂ ಇಂಡಿಯಾ ನಾಯಕ ರಣಜಿ ಟ್ರೋಫಿ ಪಂದ್ಯಾವಳಿಯಲ್ಲಿ ಭಾಗಿಯಾಗಿದ್ದು ಇಲ್ಲೂ ದಯನೀಯ ವೈಫಲ್ಯ ಅನುಭವಿಸಿದ್ದಾರೆ.

ರಣಜಿ ಟ್ರೋಫಿಯಲ್ಲಿ ತವರು ಮುಂಬೈ ಪರ ಇಂದು ಜಮ್ಮುಕಾಶ್ಮೀರ ವಿರುದ್ಧದ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕಿಳಿದಿದ್ದಾರೆ. ಆದರೆ ರಣಜಿ ಪಂದ್ಯದಲ್ಲೂ ಅವರ ಕಳಪೆ ಫಾರ್ಮ್ ಮುಂದುವರಿದಿದ್ದು ಹೀಗಾದರೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಏನು ಕತೆ ಎಂದು ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ.

19 ಎಸೆತಗಳನ್ನು ಎದುರಿಸಿದ ರೋಹಿತ್ ಶರ್ಮಾ ಗಳಿಸಿದ್ದು ಕೇವಲ 3 ರನ್. ಬಳಿಕ ಪರಸ್ ಡೋಗ್ರಾ ಬೌಲಿಂಗ್ ನಲ್ಲಿ ಕ್ಯಾಚಿತ್ತು ನಿರ್ಗಮಿಸಿದ್ದಾರೆ. ಮುಂಬೈ ಆಗಲೇ ಆರಂಭಿಕ ವಿಕೆಟ್ ಕಳೆದುಕೊಂಡಿತ್ತು. ರೋಹಿತ್ ಕೂಡಾ ಔಟಾಗುವುದರೊಂದಿಗೆ ತಂಡ ಸಂಕಷ್ಟಕ್ಕೆ ಸಿಲುಕಿತು.

ಇದರ ಬೆನ್ನಲ್ಲೇ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಕಾಮೆಂಟ್ ಗಳು ಬಂದಿವೆ. ಅಂತಾರಾಷ್ಟ್ರೀಯ ಕ್ರಿಕೆಟ್ ಬಿಡಿ, ದೇಶೀಯ ಕ್ರಿಕೆಟ್ ನಲ್ಲಿಯೇ ಈ ಕತೆಯಾದರೆ ಮುಂದೆ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಬರಲಿದೆ. ಆಗಲೂ ಇದೇ ಫಾರ್ಮ್ ಮುಂದುವರಿಸಿದರೆ ಮತ್ತೆ ತಂಡ ಸಂಕಷ್ಟಕ್ಕೆ ಸಿಲುಕುವುದು ಖಚಿತ. ಅದರಲ್ಲೂ ರೋಹಿತ್ ನಾಯಕ ಬೇರೆ. ಹೀಗೇ ಮುಂದುವರಿದಿರೆ ಚಾಂಪಿಯನ್ಸ್ ಟ್ರೋಫಿಯಲ್ಲೂ ಯಾವುದೇ ಭರವಸೆಯಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

ಮುಂದಿನ ಸುದ್ದಿ
Show comments