Webdunia - Bharat's app for daily news and videos

Install App

ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ರೋಹಿತ್ ಶರ್ಮಾಗೆ ಸಿಕ್ತು ಗಣೇಶನ ಆಶೀರ್ವಾದ

Krishnaveni K
ಶನಿವಾರ, 6 ಜುಲೈ 2024 (10:38 IST)
ಮುಂಬೈ: ಟೀಂ ಇಂಡಿಯಾಗೆ 17 ವರ್ಷಗಳ ಬಳಿಕ ಟಿ20 ವಿಶ್ವಕಪ್ ಗೆದ್ದುಕೊಟ್ಟ ನಾಯಕ ರೋಹಿತ್ ಶರ್ಮಾಗೆ ಈಗ ಎಲ್ಲೆಡೆಯಿಂದ ಪ್ರಶಂಸೆಗಳ ಸುರಿಮಳೆಯಾಗುತ್ತಿದೆ. ರೋಹಿತ್ ಮುಂದಿನ ಟಾರ್ಗೆಟ್ ಚಾಂಪಿಯನ್ಸ್ ಟ್ರೋಫಿ ಆಗಿದ್ದು ಅದನ್ನು ಗೆಲ್ಲಲು ಈಗ ಗಣೇಶನ ಆಶೀರ್ವಾದ ಸಿಕ್ಕಿದೆ.

ಮೊನ್ನೆಯಷ್ಟೇ ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆಲುವಿನ ಬಳಿಕ ವಿಶೇಷ ವಿಮಾನದಲ್ಲಿ ಬಾರ್ಬಡೋಸ್ ನಿಂದ ಭಾರತಕ್ಕೆ ಬಂದಿಳಿದಿತ್ತು. ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿ ಬಳಿಕ ಸಂಜೆ ಮುಂಬೈನಲ್ಲಿ ರೋಡ್ ಶೋ ಮೂಲಕ ಸಂಭ್ರಮಾಚರಣೆ ನಡೆದಿತ್ತು.

ಇದೆಲ್ಲಾ ಗೌಜಿ ಗದ್ದಲ ಬಳಿಕ ಮನೆಗೆ ಮರಳಿದ ರೋಹಿತ್ ಗೆ ಅಲ್ಲಿಯೂ ಗೆಳೆಯರಿಂದ ಭರ್ಜರಿ ಸ್ವಾಗತ ದೊರೆತಿತ್ತು. ಭಾರತಕ್ಕೆ ವಿಶ್ವಕಪ್ ಗೆಲ್ಲಿಸಿಕೊಟ್ಟ ರೋಹಿತ್ ಗೆ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಕೂಡಾ ಗೌರವ ಸಲ್ಲಿಸಿದ್ದಾರೆ. ಗಣೇಶನ ಮೂರ್ತಿಯೊಂದನ್ನು ನೀಡಿ ರೋಹಿತ್ ಗೆ ಶಾಲು ಹೊದೆಸಿ ಏಕನಾಥ ಶಿಂಧೆ ಸನ್ಮಾನಿಸಿದ್ದಾರೆ.

ಇದನ್ನು ನೋಡಿದ ನೆಟ್ಟಿಗರು ರೋಹಿತ್ ಗೆ ಗಣಪತಿ ಬಪ್ಪಾ ಆಶೀರ್ವಾದ ಸಿಕ್ಕಾಯ್ತು. ಮುಂದಿನ ಟಾರ್ಗೆಟ್ ಚಾಂಪಿಯನ್ಸ್ ಟ್ರೋಫಿ ಎಂದಿದ್ದಾರೆ. ಪಾಕಿಸ್ತಾನದಲ್ಲಿ ಮುಂದಿನ ವರ್ಷ ಆರಂಭದಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದ್ದು, ಈ ಟೂರ್ನಿಯನ್ನು ಗೆಲ್ಲುವುದು ಭಾರತದ ಮುಂದಿನ ಗುರಿಯಾಗಿರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments