ಗಾಯದಿಂದ ಪೆವಿಲಿಯನ್ ಸೇರಿದ ರೋಹಿತ್: ಟೀಂ ಇಂಡಿಯಾ ಸ್ಥಿತಿ ಶೋಚನೀಯ

Webdunia
ಬುಧವಾರ, 7 ಡಿಸೆಂಬರ್ 2022 (16:28 IST)
Photo Courtesy: Twitter
ಡಾಕಾ: ಬಾಂಗ್ಲಾದೇಶ ವಿರುದ್ಧ ದ್ವಿತೀಯ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಫೀಲ್ಡಿಂಗ್ ವೇಳೆ ಕೈಗೆ ಗಾಯ ಮಾಡಿಕೊಂಡಿದ್ದು, ಭಾರತದ ಸ್ಥಿತಿ ಶೋಚನೀಯವಾಗಿದೆ.

ಬಾಂಗ್ಲಾದಂತಹ ದುರ್ಬಲ ತಂಡದ ಎದುರೂ ಟೀಂ ಇಂಡಿಯಾ ಘಟಾನುಘಟಿಗಳು ಪ್ರತಿರೋಧವೇ ತೋರದೇ ಶರಣಾಗುತ್ತಿರುವುದು ಶೋಚನೀಯ. ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾ 50 ಓವರ್ ಗಳಲ್ಲಿ 7  ವಿಕೆಟ್ ನಷ್ಟಕ್ಕೆ 271 ರನ್ ಗಳಿಸಿತು. 6 ನೇ ವಿಕೆಟ್ ಗೆ ಮೆಹದಿ ಹಸನ್ ಮತ್ತು ಮೊಹಮ್ಮದುಲ್ಲಾ 100 ಪ್ಲಸ್ ರನ್ ಗಳ ಜೊತೆಯಾಟವಾಡಿದರು. ಅದರಲ್ಲೂ ಕಳೆದ ಪಂದ್ಯದಲ್ಲಿ ಬಾಂಗ್ಲಾಕ್ಕೆ ರೋಚಕ ಗೆಲುವು ಕೊಡಿಸಿದ್ದ ಮೆಹದಿ ಹಸನ್ ಈ ಪಂದ್ಯದಲ್ಲಿ ಅಜೇಯ 100 ರನ್ ಗಳಿಸಿ ಅಬ್ಬರಿಸಿದರು. ಮೊಹಮ್ಮದುಲ್ಲಾ 77 ರನ್ ಗೆ ವಿಕೆಟ್ ಒಪ್ಪಿಸಿದರು. ಕೊನೆಯ ಐದು ಓವರ್ ಗಳಲ್ಲಿ ಬಾಂಗ್ಲಾ ರನ್ ಹೊಳೆ ಹರಿಸಿತು. ಯುವ ವೇಗಿ ಉಮ್ರಾನ್ ಮಲಿಕ್ (2 ವಿಕೆಟ್) ರನ್ನು ಮೆಹದಿ ವಿಶೇಷವಾಗಿ ಮನಬಂದಂತೆ ದಂಡಿಸಿದರು. ವಾಷಿಂಗ್ಟನ್ ಸುಂದರ್ 3, ಮೊಹಮ್ಮದ್ ಸಿರಾಜ್ 2 ವಿಕೆಟ್ ಕಬಳಿಸಿದರು.

ಈ ಮೊತ್ತ ಬೆನ್ನತ್ತಲು ಹೊರಟ ಭಾರತಕ್ಕೆ ರೋಹಿತ್ ಗಾಯ ದೊಡ್ಡ ಆಘಾತ ನೀಡಿದೆ. ರೋಹಿತ್ ಅರ್ಧದಲ್ಲೇ ಮೈದಾನ ಬಿಟ್ಟು ತೆರಳಿದರು. ಎಕ್ಸ್ ರೇ ಮುಗಿಸಿ ಪೆವಿಲಿಯನ್ ಗೆ ಬಂದರೂ ಇದೀಗ ಚೇಸಿಂಗ್ ವೇಳೆ ಆರಂಭಿಕರಾಗಿ ಕಣಕ್ಕಿಳಿದಿಲ್ಲ. ಅವರ ಬದಲು ಆರಂಭಿಕರಾಗಿ ಬಂದ ವಿರಾಟ್ ಕೊಹ್ಲಿ ಕೇವಲ 5 ರನ್ ಗೆ ವಿಕೆಟ್ ಒಪ್ಪಿಸಿದರೆ ಶಿಖರ್ ಧವನ್ ರದ್ದು ಮತ್ತೊಂದು ಫ್ಲಾಪ್ ಶೋ. ಅವರು 8 ರನ್ ಗಳಿಸಿ ಪೆವಿಲಿಯನ್ ಗೆ ಮರಳಿದರು. ಭಾರತ ಇತ್ತೀಚೆಗಿನ ವರದಿ ಬಂದಾಗ 2 ವಿಕೆಟ್ ನಷ್ಟಕ್ಕೆ 18 ರನ್ ಗಳಿಸಿ ದಯನೀಯ ಪರಿಸ್ಥಿತಿಯಲ್ಲಿದೆ. ಬಾಂಗ್ಲಾದಂತಹ ದುರ್ಬಲ ತಂಡದ ಎದುರೂ ಟೀಂ ಇಂಡಿಯಾದಂತಹ ದಿಗ್ಗಜ ತಂಡ ಪರದಾಡುತ್ತಿರುವುದು ನೋಡಿದರೆ ವಿಪರ್ಯಾಸವೆನಿಸುತ್ತದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND- SA 2nd ODI: ವಿರಾಟ್‌, ಋತುರಾಜ್‌ ಶತಕ ವ್ಯರ್ಥ; ರನ್‌ ಮಳೆಯಲ್ಲಿ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ,

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ವಿರಾಟ್‌ ಕೊಹ್ಲಿ ದಾಖಲೆಯ 53ನೇ ಏಕದಿನ ಶತಕ: ಟೀಕಾಕಾರರಿಗೆ ಬ್ಯಾಟ್‌ ಮೂಲಕವೇ ಉತ್ತರ

ಐಸಿಸಿ ನೀತಿ ಸಂಹಿತೆ ಉಲ್ಲಂಘನೆಗಾಗಿ ವಾಗ್ದಂಡನೆಗೆ ಗುರಿಯಾದ ಗಂಭೀರ್‌ ಮಾನಸಪುತ್ರ ಹರ್ಷಿತ್ ರಾಣಾ

IND vs SA ODI: ದಾಖಲೆಯ 20ನೇ ಬಾರಿ ಟಾಸ್ ಸೋತ ಭಾರತ: ದ.ಆಫ್ರಿಕಾ ತಂಡದಲ್ಲಿ ಮೂರು ಬದಲಾವಣೆ

ಮುಂದಿನ ಸುದ್ದಿ
Show comments