Webdunia - Bharat's app for daily news and videos

Install App

ಸಿಡ್ನಿ ಟೆಸ್ಟ್ ಬಳಿಕ ರೋಹಿತ್ ಶರ್ಮಾ ನಿವೃತ್ತಿಯಾಗ್ತಾರಾ: ಹಿಟ್ ಮ್ಯಾನ್ ಮಹತ್ವದ ಉತ್ತರ

Krishnaveni K
ಶನಿವಾರ, 4 ಜನವರಿ 2025 (08:30 IST)
ಸಿಡ್ನಿ: ಕಳಪೆ ಫಾರ್ಮ್ ನಿಂದಾಗಿ ಸಿಡ್ನಿ ಟೆಸ್ಟ್ ನಿಂದ ಹೊರಗುಳಿದಿರುವ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಈ ಪಂದ್ಯದ ಬಳಿಕ ನಿವೃತ್ತಿಯಾಗಬಹುದು ಎಂಬ ಮಾತು ಕೇಳಿಬರುತ್ತಿತ್ತು. ಅದಕ್ಕೀಗ ಅವರೇ ಉತ್ತರ ನೀಡಿದ್ದಾರೆ.

ರೋಹಿತ್ ಶರ್ಮಾ ಈ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದು ಸಾಕಷ್ಟು ಚರ್ಚೆಗಳಿಗೆ ಕಾರಣವಾಗಿತ್ತು. ತಂಡದ ಒಡಕು ಬಟಾ ಬಯಲಾಗಿತ್ತು. ಕೋಚ್ ಗೌತಮ್ ಗಂಭೀರ್ ಜೊತೆಗೆ ರೋಹಿತ್ ಸಂಬಂಧ ಸಂಪೂರ್ಣ ಹಳಸಿದೆ ಎನ್ನಲಾಗಿತ್ತು. ಆದರೆ ಈಗ ಎಲ್ಲಾ ಅನುಮಾನಗಳಿಗೆ ಸ್ವತಃ ರೋಹಿತ್ ಉತ್ತರ ನೀಡಿದ್ದಾರೆ.

‘ನಾನು ರನ್ ಗಳಿಸಲು ವಿಫಲನಾಗುತ್ತಿದ್ದೇನೆ ಎಂಬ ಕಾರಣಕ್ಕೆ ಈ ಟೆಸ್ಟ್ ನಿಂದ ಹೊರಗುಳಿಯುವ ನಿರ್ಧಾರ ಮಾಡಿದೆ. ಆದರೆ ಸದ್ಯಕ್ಕೆ ನಾನು ಕ್ರಿಕೆಟ್ ಬಿಟ್ಟು ಎಲ್ಲೂ ಹೋಗಲ್ಲ. ಈ ಪಂದ್ಯದ ಬಳಿಕ ನಿವೃತ್ತಿಯಾಗುವ ಯೋಚನೆಯೂ ಇಲ್ಲ. ನಾನು ಕೋಚ್ ಮತ್ತು ಆಯ್ಕೆ ಸಮಿತಿ ಜೊತೆ ಮಾತನಾಡಿದೆ. ಸದ್ಯಕ್ಕೆ ತಂಡಕ್ಕೆ ಏನು ಅಗತ್ಯವೆನಿಸಿತೋ ಅದನ್ನೇ ಮಾಡಿದ್ದೇವೆ. ತಂಡಕ್ಕೆ ಒಬ್ಬ ಒಳ್ಳೆಯ ಫಾರ್ಮ್ ನಲ್ಲಿರುವ ಬ್ಯಾಟಿಗನ ಅಗತ್ಯವಿತ್ತು. ಅದಕ್ಕೇ ನಾನು ಹಿಂದೆ ಸರಿದೆ. ಪರ್ತ್ ನಲ್ಲಿ ನಾನು ಇಲ್ಲದೇ ಇರುವಾಗ ತಂಡ ಗೆದ್ದಿರುವುದಕ್ಕೆ ಕಾರಣ ಎಲ್ಲರಿಗೂ ಗೊತ್ತು. ರಾಹುಲ್-ಜೈಸ್ವಾಲ್ ನಡುವಿನ ಆ 200 ರನ್ ಗಳ ಜೊತೆಯಾಟ ನಮ್ಮನ್ನು ರಕ್ಷಿಸಿತು. ಸೋಲುತ್ತಿದ್ದ ಪಂದ್ಯವನ್ನು ಅವರು ನಮ್ಮ ಪರವಾಗಿ ಮಾಡಿದರು’ ಎಂದಿದ್ದಾರೆ.

ಟೆಸ್ಟ್ ಕ್ರಿಕೆಟ್ ನಿಂದ ರೋಹಿತ್ ನಿವೃತ್ತಿಯಾಗಲಿದ್ದಾರೆ ಎಂಬ ಎಲ್ಲಾ ವದಂತಿಗಳಿಗೆ ಈ ಪ್ರತಿಕ್ರಿಯೆ ಉತ್ತರ ನೀಡಿದೆ. ಆದರೆ ಮುಂಬರುವ ದಿನಗಳಲ್ಲಿ ಅವರಿಗೆ ಟೆಸ್ಟ್ ನಾಯಕತ್ವ ಸಿಗುತ್ತದೆಯೇ ಎಂಬುದು ಆಯ್ಕೆ ಸಮಿತಿಗೆ ಬಿಟ್ಟ ವಿಚಾರ. ಆದರೆ ಹಿಟ್ ಮ್ಯಾನ್ ನಿವೃತ್ತಿಯಾಗುತ್ತಿಲ್ಲ ಎನ್ನುವುದು ಅವರ ಅಭಿಮಾನಿಗಳ ಸಂತೋಷಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments