Webdunia - Bharat's app for daily news and videos

Install App

ಬೆಳ್ಳಂ ಬೆಳಿಗ್ಗೆ ಧರ್ಮಶಾಲಾಗೆ ಬಂದು ಕ್ಯುರೇಟರ್ ಭೇಟಿಯಾದ ದ್ರಾವಿಡ್-ರೋಹಿತ್ ಶರ್ಮಾ

Krishnaveni K
ಮಂಗಳವಾರ, 5 ಮಾರ್ಚ್ 2024 (13:44 IST)
Photo Courtesy: Twitter
ಧರ್ಮಶಾಲಾ:ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಅಂತಿಮ ಟೆಸ್ಟ್ ಪಂದ್ಯ ಧರ್ಮಶಾಲಾದಲ್ಲಿ ಮಾರ್ಚ್ 7 ರಿಂದ ಆರಂಭವಾಗಲಿದೆ. ಈ ಪಂದ್ಯದ ಪಿಚ್ ಬಗ್ಗೆ ರೋಹಿತ್ ಶರ್ಮಾ-ರಾಹುಲ್ ದ್ರಾವಿಡ್ ಕ್ಯುರೇಟರ್ ಜೊತೆ ಮಾತುಕತೆ ನಡೆಸಿದ್ದಾರೆ.

ಧರ್ಮಶಾಲಾದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯಕ್ಕೆ ಹವಾಮಾನ ವರದಿ ಪ್ರಕಾರ ಮಳೆ ಭೀತಿಯಿದೆ. ಭಾರತ ತಂಡ ಇಲ್ಲಿಗೆ ಕಾಲಿಟ್ಟ ಗಳಿಗೆಯಲ್ಲೇ ಮಳೆಯಾಗುತ್ತಿದೆ. ಹೀಗಾಗಿ ಅಂತಿಮ ಟೆಸ್ಟ್ ಪಂದ್ಯಕ್ಕೆ ನಡೆಯುವುದು ಅನುಮಾನ ಎನ್ನುವ ವರಿದಗಳೂ ಇವೆ. ಈಗಾಗಲೇ ಭಾರತ ಸರಣಿ ಗೆದ್ದಿರುವುದರಿಂದ ಈ ಪಂದ್ಯದ ಫಲಿತಾಂಶ ಭಾರತದ ಮೇಲೆ ಏನೂ ಪರಿಣಾಮ ಬೀರದು.

ನಾಲ್ಕನೇ ಟೆಸ್ಟ್ ಪಂದ್ಯದ ಬಳಿಕ ಟೀಂ ಇಂಡಿಯಾ ಆಟಗಾರರಿಗೆ ಸಾಕಷ್ಟು ಬಿಡುವು ಸಿಕ್ಕಿತ್ತು. ಈ ಬಿಡುವಿನಲ್ಲಿ ಭಾರತೀಯ ಕ್ರಿಕೆಟಿಗರು ಕುಟುಂಬದ ಜೊತೆ ಕಾಲ ಕಳೆದುಬಂದಿದ್ದಾರೆ. ಅತ್ತ ಇಂಗ್ಲೆಂಡ್ ಆಟಗಾರರು ಬೆಂಗಳೂರಿಗೆ ಬಂದು ರಿಲ್ಯಾಕ್ಸ್ ಆಗಿದ್ದಾರೆ.

ಇದೀಗ ಫ್ರೆಶ್ ಆಗಿ ಐದನೇ ಪಂದ್ಯಕ್ಕೆ ಕಣಕ್ಕಿಳಿಯುತ್ತಿದ್ದಾರೆ. ಇದರ ನಡುವೆ ಧರ್ಮಶಾಲಾದ ಪಿಚ್ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ. ಇಂದು ಬೆಳಿಗ್ಗೆಯೇ ಇಲ್ಲಿಗೆ ಬಂದ ನಾಯಕ ರೋಹಿತ್ ಶರ್ಮಾ ಮತ್ತು ಕೋಚ್ ರಾಹುಲ್ ದ್ರಾವಿಡ್ ಪಿಚ್ ಕ್ಯುರೇಟರ್ ಜೊತೆ ಸುದೀರ್ಘ ಮಾತುಕತೆ ನಡೆಸಿದ್ದು, ಪಿಚ್ ಬಗ್ಗೆ ಸಲಹೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಕೋಚ್ ಮತ್ತು ನಾಯಕ ಸಲಹೆಯನ್ನು ಪರಿಗಣಿಸಿ ಅಂತಿಮ ಪಂದ್ಯಕ್ಕೆ ಪಿಚ್ ಮಾಡಿಕೊಡಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಮುಂದಿನ ಸುದ್ದಿ
Show comments