Webdunia - Bharat's app for daily news and videos

Install App

ಟಿ20 ವಿಶ್ವಕಪ್ ಗೆಲುವಿನ ಬಳಿಕ ಹುಲ್ಲು ತಿಂದಿದ್ದೇಕೆ ರಿವೀಲ್ ಮಾಡಿದ ರೋಹಿತ್ ಶರ್ಮಾ

Krishnaveni K
ಮಂಗಳವಾರ, 2 ಜುಲೈ 2024 (12:15 IST)
ಬಾರ್ಬಡೋಸ್: ಟಿ20 ವಿಶ್ವಕಪ್ 2024 ರ ಫೈನಲ್ ಪಂದ್ಯವನ್ನು ಗೆದ್ದ ಬಳಿಕ ಚಾಂಪಿಯನ್ ಆದ ಖುಷಿಯಲ್ಲಿದ್ದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಪಿಚ್ ಬಳಿ ಸಾಗಿ ಹುಲ್ಲು ತಿಂದಿದ್ದು ಎಲ್ಲರ ಗಮನ ಸೆಳೆದಿತ್ತು. ಇದಕ್ಕೆ ಕಾರಣವೇನೆಂದು ಅವರೀಗ ರಿವೀಲ್ ಮಾಡಿದ್ದಾರೆ.

ಟ್ರೋಫಿ ಜೊತೆಗೆ ಫೋಟೋ ಶೂಟ್ ವೇಳೆ ರೋಹಿತ್ ಶರ್ಮಾ ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋವನ್ನು ಬಿಸಿಸಿಐ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದೆ. ಈ ವಿಡಿಯೋದಲ್ಲಿ ರೋಹಿತ್ ಪಿಚ್ ನ ಹುಲ್ಲು ತಿಂದಿದ್ದು ಯಾಕೆ ಎಂಬುದನ್ನು ಬಹಿರಂಗಪಡಿಸಿದ್ದಾರೆ.

‘ಯಾವುದೂ ಉದ್ದೇಶಪೂರ್ವಕವಾಗಿರಲಿಲ್ಲ. ನನಗೆ ಆ ಕ್ಷಣದಲ್ಲಿ ಏನು ಅನಿಸಿತೋ ಅದನ್ನು ಮಾಡಿದೆ. ಪಿಚ್ ಬಳಿ ಹೋದಾಗ ಇದೇ ಪಿಚ್ ನಮಗೆ ವಿಶ್ವಕಪ್ ತಂದುಕೊಟ್ಟಿದ್ದು, ಇಲ್ಲಿಯೇ ನಾವು ಆಡಿದ್ದು ಎಂಬ ಭಾವನೆ ಬಂತು. ಈ ಮೈದಾನ, ಪಿಚ್ ನ್ನು ನಾನು ಜೀವಮಾನದಲ್ಲಿ ಮರೆಯಲಾರೆ’ ಎಂದಿದ್ದಾರೆ.

‘ಈ ಪಿಚ್ ನ ತುಣುಕು ಯಾವತ್ತೂ ನನ್ನೊಳಗಿರಲಿ ಎಂಬ ಕಾರಣಕ್ಕೆ ಹುಲ್ಲಿನ ತುಣುಕನ್ನು ಸೇವಿಸಿದೆ. ಇದು ನನ್ನ ಕನಸು ನನಸಾದ ಜಾಗ. ಈ ಜಾಗ ಯಾವತ್ತೂ ನನಗೆ ವಿಶೇಷ. ಇದೇ ಕಾರಣಕ್ಕೆ ಹುಲ್ಲು ಸೇವಿಸಿದೆ’ ಎಂದು ರೋಹಿತ್ ಶರ್ಮಾ ಕಾರಣ ವಿವರಿಸಿದ್ದಾರೆ. ಇನ್ನು, ಈ ಗೆಲುವು ಈಗಲೂ ಕನಸೋ ನನಸೋ ಎಂದು ನಂಬಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments