Publish Date: Tue, 27 Dec 2022 (11:05 IST)
Updated Date: Tue, 27 Dec 2022 (11:07 IST)
ಮುಂಬೈ: ಟೀಂ ಇಂಡಿಯಾ-ಶ್ರೀಲಂಕಾ ನಡುವಿನ ಟಿ20 ಸರಣಿಗೆ ಇಂದು ತಂಡದ ಆಯ್ಕೆ ನಡೆಯಲಿದ್ದು, ಇದಕ್ಕೂ ಮೊದಲು ಕ್ಯಾಪ್ಟನ್ ರೋಹಿತ್ ಶರ್ಮಾ ಸ್ಪಷ್ಟ ಸಂದೇಶ ನೀಡಿದ್ದಾರೆ.
ಬೆರಳಿನ ಗಾಯದಿಂದಾಗಿ ರೋಹಿತ್ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದರು. ಇದೀಗ ಕಮ್ ಬ್ಯಾಕ್ ಮಾಡಲು ಕಾಯುತ್ತಿದ್ದಾರೆ. ಆದರೆ ಲಂಕಾ ಸರಣಿಗೆ ಅವರನ್ನು ಹೊರಗಿಟ್ಟು ಹಾರ್ದಿಕ್ ಪಾಂಡ್ಯಗೆ ನಾಯಕತ್ವ ನೀಡಬಹುದು ಎಂಬ ಮಾತು ಕೇಳಿಬರುತ್ತಿದೆ.
ಇದರ ಬೆನ್ನಲ್ಲೇ ರೋಹಿತ್ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಭ್ಯಾಸ ನಡೆಸುತ್ತಿರುವ ಫೋಟೋಗಳನ್ನು ಪ್ರಕಟಿಸಿ ತಂಡಕ್ಕೆ ಕಮ್ ಬ್ಯಾಕ್ ಮಾಡಲು ರೆಡಿ ಎಂದು ಸಂದೇಶ ನೀಡಿದ್ದಾರೆ.