Webdunia - Bharat's app for daily news and videos

Install App

ಕೆಕೆಆರ್ ಕೋಚ್ ಜೊತೆಗೆ ಮುಂಬೈ ಇಂಡಿಯನ್ಸ್ ಮೇಲೆ ಅಸಮಾಧಾನ ತೋಡಿಕೊಂಡ ರೋಹಿತ್ ಶರ್ಮಾ

Krishnaveni K
ಶನಿವಾರ, 11 ಮೇ 2024 (15:20 IST)
ಕೋಲ್ಕೊತ್ತಾ: ಮುಂಬೈ ಇಂಡಿಯನ್ಸ್ ಪಾಳಯದಲ್ಲಿ ರೋಹಿತ್ ಶರ್ಮಾರನ್ನು ನಾಯಕತ್ವದಿಂದ ಕಿತ್ತು ಹಾಕಿ ಹಾರ್ದಿಕ್ ಪಾಂಡ್ಯಗೆ ಪಟ್ಟ ಕಟ್ಟಿದ ಮೇಲೆ ಯಾವುದೂ ಸರಿ ಹೋಗುತ್ತಿಲ್ಲ ಎಂಬ ಸುದ್ದಿಯಿತ್ತು. ರೋಹಿತ್ ಶರ್ಮಾರನ್ನು ಕಡೆಗಣಿಸಲಾಗುತ್ತಿದೆ ಎಂಬ ಆರೋಪಗಳಿಗೆ ಪುಷ್ಟಿ ನೀಡುವಂತಹ ವಿಡಿಯೋವೊಂದು  ವೈರಲ್ ಆಗಿತ್ತು.

ರೋಹಿತ್ ಶರ್ಮಾ ಮತ್ತು ಕೋಲ್ಕೊತ್ತಾ ನೈಟ್ ರೈಡರ್ಸ್ ಕೋಚ್ ಅಭಿಷೇಕ್ ನಾಯರ್ ನಡುವೆ ನಡೆದ ಸಂಭಾಷಣೆಯ ತುಣುಕನ್ನು ಕೆಕೆಆರ್ ತನ್ನ ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿತ್ತು. ಆದರೆ ಈ ವಿಡಿಯೋದಲ್ಲಿ ರೋಹಿತ್ ಮುಂಬೈ ತಂಡದ ವಿರುದ್ಧ ತಮ್ಮ ಅಸಮಾಧಾನ ಹೊರಹಾಕುತ್ತಾರೆ.

ವಿಡಿಯೋದಲ್ಲಿ ರೋಹಿತ್ ‘ಒಂದೊಂದಾಗಿ ಎಲ್ಲವೂ ಬದಲಾಗುತ್ತಿದೆ. ಇದೆಲ್ಲಾ ಅವರಿಗೆ ಬಿಟ್ಟಿದ್ದು, ನಾನು ಯಾವುದಕ್ಕೂ ತಲೆಕೆಡಿಸಿಕೊಳ್ಳಲ್ಲ. ಏನೇ ಆದರೂ ಇದು ನನ್ನ ಮನೆ. ನಾನು ಕಟ್ಟಿದ ದೇವಸ್ಥಾನವಿದು’ ಎನ್ನುತ್ತಾರೆ. ರೋಹಿತ್ ಮುಂಬೈ ತಂಡದ ಹೆಸರನ್ನು ನೇರವಾಗಿ ಹೇಳದೇ ಇದ್ದರೂ ಅವರು ತಮ್ಮದೇ ಫ್ರಾಂಚೈಸಿಯ ಬಗ್ಗೆಯೇ ಹೇಳಿರುವುದೆಂದು ಊಹಿಸಲಾಗಿದೆ. ಕೊನೆಯಲ್ಲಿ ‘ಏನು ಮಾಡಿದರೂ ನಂಗೇನಾಗಬೇಕಿದೆ? ನನ್ನದು ಇದೇ ಕೊನೆಯದ್ದು’ ಎನ್ನುತ್ತಾರೆ.

ರೋಹಿತ್ ರ ಈ ಸಂಭಾಷಣೆ ವೈರಲ್ ಆಗುತ್ತಿದ್ದಂತೇ ಕೋಲ್ಕೊತ್ತಾ ಫ್ರಾಂಚೈಸಿ ವಿಡಿಯೋವನ್ನೇ ಸೋಷಿಯಲ್ ಮೀಡಿಯಾದಿಂದ ಕಿತ್ತು ಹಾಕಿದೆ. ಮೊನ್ನೆಯಷ್ಟೇ ನಡೆದ ಕೆಕೆಆರ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದ ವೇಳೆ ಈ ಸಂಭಾಷಣೆ ನಡೆದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

RCB ವೇಗಿ ಯಶ್ ದಯಾಳ್ ವಿರುದ್ಧ ಬಾಲಕಿ ಮೇಲೆ ರೇಪ್ ಆರೋಪ: ಎಫ್ಐಆರ್ ದಾಖಲು

Rishabh Pant: ಅನಿಲ್ ಕುಂಬ್ಳೆಯನ್ನು ನೆನಪಿಸಿದ ರಿಷಭ್ ಪಂತ್

END vs IND Match, ಗ್ರೌಂಡ್‌ಗೆ ಕೈಮುಗಿದು ಕುಟುಂತ್ತಲೇ ಬ್ಯಾಟಿಂಗ್‌ಗೆ ಬಂದ ರಿಷಬ್ ಪಂತ್‌, Video

ಮುಂದಿನ ಸುದ್ದಿ
Show comments