ವಿಶ್ವಕಪ್ ಸೋಲಿನ ಕಣ್ಣೀರಿಗೆ ಸೇಡು ತೀರಿಸಿಕೊಂಡ ರೋಹಿತ್ ಶರ್ಮಾ

Webdunia
ಗುರುವಾರ, 30 ಜನವರಿ 2020 (09:24 IST)
ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯದ ಸೂಪರ್ ಓವರ್ ನಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡಿದ್ದು ನೋಡಿದರೆ ಅವರನ್ನು ಹಿಟ್ ಮ್ಯಾನ್ ಎಂದು ಕರೆಯುವುದಕ್ಕೂ ಸಾರ್ಥಕವಾಯಿತು ಎನಿಸಬಹುದು.


ವಿಶ್ವಕಪ್ ಸೆಮಿಫೈನಲ್ ನಲ್ಲಿ ಇದೇ ನ್ಯೂಜಿಲೆಂಡ್ ವಿರುದ್ಧ ಸೋತಾಗ ಪೆವಿಲಿಯನ್ ನಲ್ಲಿ ಕೂತು ಕಣ್ಣೀರು ಹಾಕಿದ್ದ ರೋಹಿತ್ ಇಂದು ಅದೇ ಕಿವೀಸ್ ನಾಡಿನಲ್ಲಿ ಟಿ20 ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಆ ಮೂಲಕ ಅಂದಿನ ಕಣ್ಣೀರಿಗೆ ಮುಯ್ಯಿ ತೀರಿಸಿಕೊಂಡರು. ಅತ್ತ ನ್ಯೂಜಿಲೆಂಡ್ ಗೆ ಮತ್ತೆ ಸೂಪರ್ ಓವರ್ ಎನ್ನುವುದು ನತದೃಷ್ಟ ವಿಚಾರವಾಗಿ ಉಳಿಯಿತು.

ಲೀಲಾಜಾಲವಾಗಿ ಸಿಕ್ಸರ್ ಎತ್ತುವ ಕಾರಣಕ್ಕೇ ಸೂಪರ್ ಓವರ್ ನಲ್ಲಿ ರೋಹಿತ್ ಕಣಕ್ಕಿಳಿದಿದ್ದರು. ಕೊನೆಯ ಎರಡು ಎಸೆತಗಳಲ್ಲಿ ಅವರು ಸಿಕ್ಸರ್ ಬಾರಿಸಿದ ರೀತಿ ಅವರು ತಮ್ಮನ್ನು ಹಿಟ್ ಮ್ಯಾನ್  ಕರೆಯುವುದನ್ನು ಸಮರ್ಥಿಸಿದಂತಾಯಿತು. ಒಂದು ವೇಳೆ ರೋಹಿತ್ ಗೆ ಈ ಗೆಲುವು ಕೊಡಿಸಲು ಸಾಧ್ಯವಾಗದೇ ಹೋಗಿದ್ದರೆ ಬಹುಶಃ ಅವರ ಇದುವರೆಗಿನ ಸಿಕ್ಸರ್ ದಾಖಲೆಗಳಿಗೂ ಬೆಲೆಯಿರುತ್ತಿಲ್ಲವೇನೋ!

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಎಲ್ಲರೂ ಫುಟ್ಬಾಲ್ ಫೈನಲ್ ನೋಡ್ತಿರುವಾಗ ಮೇಕೆ ಬಂದು ಹೀಗೆ ಮಾಡೋದಾ Video

IND vs ENG: ರೋಹಿತ್ ಶರ್ಮಾ ಔಟಾಗಿ ಹೋಗುತ್ತಿದ್ದಾಗ ವಿರಾಟ್ ಕೊಹ್ಲಿ ಏನು ಮಾಡಿದ್ರು ನೋಡಿ Video

FIFA WC: ಅರ್ಜೆಂಟೀನಾ ಗೆಲ್ಲುತ್ತೆ, ಸಂಭ್ರಮಾಚರಣೆ ಮಾಡಲು ಶಾಲೆಗಳಿಗೆ ರಜೆ ಕೊಟ್ಟಿದ್ದ ಕೇರಳ: ಆದ್ರೆ ಆಗಿದ್ದೇ ಬೇರೆ

ಮುಂದಿನ ಸುದ್ದಿ
Show comments