ವಿಶ್ವಕಪ್ ಸೋಲಿನ ಕಣ್ಣೀರಿಗೆ ಸೇಡು ತೀರಿಸಿಕೊಂಡ ರೋಹಿತ್ ಶರ್ಮಾ

Webdunia
ಗುರುವಾರ, 30 ಜನವರಿ 2020 (09:24 IST)
ಹ್ಯಾಮಿಲ್ಟನ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೂರನೇ ಟಿ20 ಪಂದ್ಯದ ಸೂಪರ್ ಓವರ್ ನಲ್ಲಿ ರೋಹಿತ್ ಶರ್ಮಾ ಬ್ಯಾಟಿಂಗ್ ಮಾಡಿದ್ದು ನೋಡಿದರೆ ಅವರನ್ನು ಹಿಟ್ ಮ್ಯಾನ್ ಎಂದು ಕರೆಯುವುದಕ್ಕೂ ಸಾರ್ಥಕವಾಯಿತು ಎನಿಸಬಹುದು.


ವಿಶ್ವಕಪ್ ಸೆಮಿಫೈನಲ್ ನಲ್ಲಿ ಇದೇ ನ್ಯೂಜಿಲೆಂಡ್ ವಿರುದ್ಧ ಸೋತಾಗ ಪೆವಿಲಿಯನ್ ನಲ್ಲಿ ಕೂತು ಕಣ್ಣೀರು ಹಾಕಿದ್ದ ರೋಹಿತ್ ಇಂದು ಅದೇ ಕಿವೀಸ್ ನಾಡಿನಲ್ಲಿ ಟಿ20 ಸರಣಿ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. ಆ ಮೂಲಕ ಅಂದಿನ ಕಣ್ಣೀರಿಗೆ ಮುಯ್ಯಿ ತೀರಿಸಿಕೊಂಡರು. ಅತ್ತ ನ್ಯೂಜಿಲೆಂಡ್ ಗೆ ಮತ್ತೆ ಸೂಪರ್ ಓವರ್ ಎನ್ನುವುದು ನತದೃಷ್ಟ ವಿಚಾರವಾಗಿ ಉಳಿಯಿತು.

ಲೀಲಾಜಾಲವಾಗಿ ಸಿಕ್ಸರ್ ಎತ್ತುವ ಕಾರಣಕ್ಕೇ ಸೂಪರ್ ಓವರ್ ನಲ್ಲಿ ರೋಹಿತ್ ಕಣಕ್ಕಿಳಿದಿದ್ದರು. ಕೊನೆಯ ಎರಡು ಎಸೆತಗಳಲ್ಲಿ ಅವರು ಸಿಕ್ಸರ್ ಬಾರಿಸಿದ ರೀತಿ ಅವರು ತಮ್ಮನ್ನು ಹಿಟ್ ಮ್ಯಾನ್  ಕರೆಯುವುದನ್ನು ಸಮರ್ಥಿಸಿದಂತಾಯಿತು. ಒಂದು ವೇಳೆ ರೋಹಿತ್ ಗೆ ಈ ಗೆಲುವು ಕೊಡಿಸಲು ಸಾಧ್ಯವಾಗದೇ ಹೋಗಿದ್ದರೆ ಬಹುಶಃ ಅವರ ಇದುವರೆಗಿನ ಸಿಕ್ಸರ್ ದಾಖಲೆಗಳಿಗೂ ಬೆಲೆಯಿರುತ್ತಿಲ್ಲವೇನೋ!

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು: ಶ್ರೇಯಸ್‌ ಅಯ್ಯರ್‌ ಪಡೆಗೆ ಮೊದಲ ಸರಣಿಯ ಜಯದ ಪುಳಕ

ZIM VS IND T20I: ಸತತ ಎರಡನೇ ಪಂದ್ಯದಲ್ಲೂ ಎಡವಿದ ಸ್ಟಾರ್ ಬ್ಯಾಟರ್‌, ಅಭಿಷೇಕ್ ಶರ್ಮಾ ಅವರನ್ನು ಕೈಬಿಡಲಾಗುವುದೇ

India vs Zimbabwe 2nd T20I: ಟಾಸ್‌ ಗೆದ್ದ ಜಿಂಬಾಬ್ವೆ, ಬೌಲಿಂಗ್ ಆಯ್ಕೆ

ಮುಂದಿನ ಸುದ್ದಿ
Show comments