Publish Date: Sun, 19 Dec 2021 (09:05 IST)
Updated Date: Sun, 19 Dec 2021 (09:05 IST)
ಬೆಂಗಳೂರು: ಕೈಗೆ ಗಾಯಮಾಡಿಕೊಂಡಿರುವ ರೋಹಿತ್ ಶರ್ಮಾ ದ.ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಮಿಸ್ ಮಾಡಿಕೊಂಡಿದ್ದಾರೆ.
ಸದ್ಯಕ್ಕೆ ಅವರೀಗ ಬೆಂಗಳೂರಿನ ಎನ್ ಸಿಎಯಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಈ ಸಂದರ್ಭವನ್ನು ಅವರು ಕೇವಲ ತಮ್ಮ ಬಗ್ಗೆ ಮಾತ್ರ ಯೋಚಿಸದೇ ಯುವ ಕ್ರಿಕೆಟಿಗರಿಗೆ ಕ್ಲಾಸ್ ಮಾಡುವ ಮೂಲಕ ಸರಿಯಾಗಿಯೇ ಬಳಸಿಕೊಳ್ಳುತ್ತಿದ್ದಾರೆ.
ಟೀಂ ಇಂಡಿಯಾದ ಸೀಮಿತ ಓವರ್ ಗಳ ಕ್ಯಾಪ್ಟನ್ ಇದೀಗ ತಾವು ಸುಧಾರಿಸಿಕೊಳ್ಳುವುದರ ಜೊತೆಗೆ ಎನ್ ಸಿಎಯಲ್ಲಿರುವ ಹೊಸ ಪ್ರತಿಭೆಗಳಿಗೆ ಕ್ರಿಕೆಟ್ ಟಿಪ್ಸ್ ನೀಡುತ್ತಿದ್ದಾರೆ. ಭಾರತ ತಂಡದ ಭವಿಷ್ಯದ ಆಟಗಾರರಿಗೆ ತರಬೇತಿ ನೀಡುವ ಮೂಲಕ ತಮ್ಮ ಸಮಯ ಸದುಪಯೋಗಪಡಿಸಿಕೊಳ್ಳುತ್ತಿದ್ದಾರೆ ಹಿಟ್ ಮ್ಯಾನ್.