Rohit Sharma: ನಾಯಕತ್ವಕ್ಕೆ ಕುತ್ತು ಬಂದ ಬೆನ್ನಲ್ಲೇ ರಣಜಿ ಟೀಂ ಸೇರಿಕೊಂಡ ರೋಹಿತ್ ಶರ್ಮಾ

Krishnaveni K
ಮಂಗಳವಾರ, 14 ಜನವರಿ 2025 (10:14 IST)
ಮುಂಬೈ: ಫಾರ್ಮ್ ಕಳೆದುಕೊಂಡು ನಾಯಕತ್ವಕ್ಕೆ ಕುತ್ತು ಬಂದ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ರಣಜಿ ತಂಡ ಸೇರಿಕೊಂಡಿದ್ದಾರೆ. ಮುಂಬೈ ತಂಡದ ಅಭ್ಯಾಸದಲ್ಲಿ ಪಾಲ್ಗೊಂಡಿದ್ದಾರೆ.

ಇತ್ತೀಚೆಗೆ ನಡೆದಿದ್ದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ರೋಹಿತ್ ಶರ್ಮಾ ಮೂರು ಪಂದ್ಯಗಳಲ್ಲಿ 5 ಇನಿಂಗ್ಸ್ ಆಡಿ ಗಳಿಸಿದ್ದು ಕೇವಲ 31 ರನ್. ಅವರು ಎರಡಂಕಿ ದಾಟಿದ್ದೇ ಅಪರೂಪ. ಜೊತೆಗೆ ನಾಯಕತ್ವವೂ ಕಳೆಗುಂದಿತ್ತು.

ಈ ಹಿನ್ನಲೆಯಲ್ಲಿ ರೋಹಿತ್ ಶರ್ಮಾರನ್ನು ತಂಡದಿಂದ ಕಿತ್ತು ಹಾಕಲು ಸಾಕಷ್ಟು ಒತ್ತಡವಿತ್ತು. ಇದರ ಬೆನ್ನಲ್ಲೇ ರೋಹಿತ್ ಶರ್ಮಾ ಜೊತೆ ಬಿಸಿಸಿಐ ಸಭೆ ನಡೆಸಿದೆ. ಈ ವೇಳೆ ಅವರ ಬ್ಯಾಟಿಂಗ್ ಕೂಡಾ ಚರ್ಚೆಯಾಗಿದೆ ಎನ್ನಲಾಗಿದೆ.

ಇದೆಲ್ಲಾ ಬೆಳವಣಿಗೆ ನಡೆವೆ ರೋಹಿತ್ ಮುಂಬೈ ತಂಡದ ರಣಜಿ ಅಭ್ಯಾಸದಲ್ಲಿ ಪಾಲ್ಗೊಂಡಿದ್ದಾರೆ. ಮುಂಬೈ ರಣಜಿ ತಂಡದೊಂದಿಗೆ ಅಭ್ಯಾಸ ನಡೆಸಲು ರೋಹಿತ್ ಅನುಮತಿ ಪಡೆದು ಬಂದಿದ್ದಾರೆ. ಹೀಗಾಗಿ ಇಂದಿನಿಂದಲೇ ರೋಹಿತ್ ಅಭ್ಯಾಸ ಆರಂಭಿಸಲಿದ್ದಾರೆ.

ಜನವರಿ 23 ರಿಂದ ಎರಡನೇ ಹಂತದ ರಣಜಿ ಪಂದ್ಯ ಆರಂಭವಾಗಲಿದೆ. ಈ ಪಂದ್ಯದಲ್ಲಿ ರೋಹಿತ್ ಪಾಲ್ಗೊಳ್ಳಲಿದ್ದಾರೆಯೇ ಎಂಬ ಅನುಮಾನ ಮೂಡಿದೆ. ಹೇಗಾದರೂ ಮಾಡಿ ಮತ್ತೆ ಫಾರ್ಮ್ ಗೆ ಮರಳಲೇ ಬೇಕೆಂದು ಪಣ ತೊಟ್ಟಿರುವ ರೋಹಿತ್ ರಣಜಿ ಆಡಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಮುಂದಿನ ಸುದ್ದಿ
Show comments