Webdunia - Bharat's app for daily news and videos

Install App

ರೋಹಿತ್ ಶರ್ಮಾ ವಿಶ್ವಕಪ್ ಗೆದ್ದ ಸಂಭ್ರಮದಲ್ಲಿ ಮಾಡಿದ ಕೆಲಸಕ್ಕೆ ದೇಶಕ್ಕೆ ಅಗೌರವ ಪಟ್ಟ

Krishnaveni K
ಮಂಗಳವಾರ, 9 ಜುಲೈ 2024 (12:24 IST)
ಮುಂಬೈ: ಟೀಂ ಇಂಡಿಯಾ ಟಿ20 ವಿಶ್ವಕಪ್ ಗೆದ್ದ ಸಂಭ್ರಮದಲ್ಲಿ ನಾಯಕ ರೋಹಿತ್ ಶರ್ಮಾ ಮಾಡಿದ ಕೆಲಸವೊಂದು ಈಗ ಅವರಿಗೇ ಮುಳುವಾಗಿದೆ. ಅವರ ಮೇಲೆ ಈಗ ಧ್ವಜಕ್ಕೆ ಅಗೌರವ ತೋರಿದ ಆರೋಪ ಕೇಳಿಬಂದಿದೆ.

ಟಿ20 ವಿಶ್ವಕಪ್ ಗೆದ್ದ ರೋಹಿತ್ ಶರ್ಮಾ ಅಸಂಖ್ಯಾತ ಭಾರತೀಯ ಅಭಿಮಾನಿಗಳ ಸಂಭ್ರಮಕ್ಕೆ ಕಾರಣರಾಗಿದ್ದರು. ಟೀಂ ಇಂಡಿಯಾ ಕಂಡ ಬೆಸ್ಟ್ ಕ್ಯಾಪ್ಟನ್ ಎಂದು ಎಲ್ಲರೂ ಹೊಗಳಿದ್ದರು. ಆದರೆ ವಿಶ್ವಕಪ್ ಗೆದ್ದ ಕ್ಷಣದಲ್ಲಿ ರೋಹಿತ್ ಭಾರತದ ಧ್ವಜವನ್ನು ಬಾರ್ಬಡೋಸ್ ಮೈದಾನದಲ್ಲಿ ಊರಲು ಪ್ರಯತ್ನಿಸಿದ್ದರು. ಈ ವಿಡಿಯೋ, ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.

ಆದರೆ ರೋಹಿತ್ ಈ ನಡೆ ಅವರಿಗೇ ಮುಳುವಾಗಿದೆ. ಈ ಫೋಟೋವನ್ನು ಅವರು ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿದ್ದರು. ರೋಹಿತ್ ಧ್ವಜ ನೆಡಲು ಪ್ರಯತ್ನಿಸುವಾಗ ಅದರ ತುದಿ ನೆಲಕ್ಕೆ ತಾಕಿತ್ತು. ಭಾರತ ಧ್ವಜ ಸಂಹಿತೆ ಪ್ರಕಾರ ನಮ್ಮ ರಾಷ್ಟ್ರೀಯ ಧ್ವಜ ಯಾವುದೇ ಕಾರಣಕ್ಕೂ ನೆಲಕ್ಕೆ ತಾಕದಂತೆ, ನೀರಿನಲ್ಲಿ ಮುಳುಗದಂತೆ ನೋಡಿಕೊಳ್ಳುವುದು ನಮ್ಮ ಕರ್ತವ್ಯವಾಗಿದೆ.

ಆದರೆ ರೋಹಿತ್ ಧ್ವಜ ನೆಡುವಾಗ ನೆಲಕ್ಕೆ ತಾಕಿದ್ದು ಸಂಹಿತೆಯ ಉಲ್ಲಂಘನೆ ಜೊತೆಗೆ ಧ್ವಜಕ್ಕೆ ಮಾಡಿದ ಅವಮಾನವಾಗಿದೆ ಎಂದು ಹಲವರು ಸೋಷಿಯಲ್ ಮೀಡಿಯಾದಲ್ಲಿ ಆರೋಪಿಸಿದ್ದಾರೆ. ಇದು ರಾಷ್ಟ್ರಧ್ವಜಕ್ಕೆ ಮಾಡಿದ ಅವಮಾನವಾಗಿದ್ದು, ತಕ್ಷಣವೇ ರೋಹಿತ್ ಈ ಫೋಟೋವನ್ನು ಸೋಷಿಯಲ್ ಮೀಡಿಯಾದಿಂದ ಕಿತ್ತು ಹಾಕಬೇಕು ಎಂದು ಆರೋಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

IND vs ENG: ಆಕಾಶ್ ದೀಪ್ ಫಿಫ್ಟಿ ಹೊಡೆದಿದ್ದಕ್ಕೆ ಹೆಲ್ಮೆಟ್ ತೆಗಿ ಎಂದು ಸಿಗ್ನಲ್ ಕೊಟ್ಟ ಶುಭಮನ್ ಗಿಲ್

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

ಮುಂದಿನ ಸುದ್ದಿ
Show comments