Select Your Language

Notifications

webdunia
webdunia
webdunia
webdunia

ರೈಲು ದುರಂತದ ಬಗ್ಗೆ ಪ್ರತಿಕ್ರಿಯಿಸಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ

ರೈಲು ದುರಂತದ ಬಗ್ಗೆ ಪ್ರತಿಕ್ರಿಯಿಸಿದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ
ಲಂಡನ್ , ಶನಿವಾರ, 3 ಜೂನ್ 2023 (16:11 IST)
ಲಂಡನ್: ಒಡಿಶಾದ ಭೀಕರ ರೈಲು ದುರಂತದಲ್ಲಿ ಸಂಭವಿಸಿದ ಸಾವು ನೋವಿನ ಬಗ್ಗೆ ಕ್ರಿಕೆಟಿಗರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಅನೇಕರು ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ವಿರಾಟ್ ಕೊಹ್ಲಿ, ದುರ್ಘಟನೆಯ ಸುದ್ದಿ ಕೇಳಿ ಬೇಸರವಾಗಿದೆ. ಜೀವ ಕಳೆದುಕೊಂಡವರ ಕುಟುಂಬದಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ, ಗಾಯಗೊಂಡವರು ಬೇಗನೇ ಚೇತರಿಸಿಕೊಳ್ಳಲಿ ಎಂದಿದ್ದಾರೆ. ಇನ್ನು ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡಾ ಟ್ವೀಟ್ ಮಾಡಿ ರೈಲು ದುರಂತದಲ್ಲಿ ತೊಂದರೆಗೀಡಾದ ಕುಟುಂಬದ ಬಗ್ಗೆ ನನ್ನ ಹೃದಯ ಮಿಡಿಯುತ್ತಿದೆ. ಅವರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೇವರು ನೀಡಲಿ ಎಂದಿದ್ದಾರೆ.

ಇವರಲ್ಲದೆ, ಕ್ರಿಕೆಟಿಗರಾದ ಗೌತಮ್ ಗಂಭೀರ್, ಹರ್ಭಜನ್ ಸಿಂಗ್, ಯುವರಾಜ್ ಸಿಂಗ್ ಸೇರಿದಂತೆ ಅನೇಕರು ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಧೋನಿ ಫೋಟೋ: ಸಿಎಸ್ ಕೆ ನಾಯಕನಿಗೆ ಆಹ್ವಾನವಿತ್ತ ಫ್ಯಾನ್!