Webdunia - Bharat's app for daily news and videos

Install App

ಮುಂಬೈ ರಣಜಿ ತಂಡಕ್ಕೆ ಸಚಿನ್ ತೆಂಡುಲ್ಕರ್ ಪಾಠ

Webdunia
ಬುಧವಾರ, 21 ಡಿಸೆಂಬರ್ 2016 (10:45 IST)
ಮುಂಬೈ: ಸಚಿನ್ ತೆಂಡುಲ್ಕರ್ ತಮ್ಮ ತವರು ರಾಜ್ಯದ ಕ್ರಿಕೆಟ್ ಹುಡುಗರಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ರಣಜಿ ಟ್ರೋಫಿ ಕ್ರಿಕೆಟ್ ನಲ್ಲಿ ಅಂತಿಮ ಸುತ್ತಿನ ಪಂದ್ಯಗಳಿಗೆ ತಯಾರಾಗುತ್ತಿರುವ ತವರು ತಂಡಕ್ಕೆ ಸಲಹೆ ನೀಡಿದ್ದಾರೆ.

ಡಿಸೆಂಬರ್ 23 ರಿಂದ ರಾಯ್ ಪುರದಲ್ಲಿ ನಡೆಯಲಿರುವ ಹೈದರಾಬಾದ್ ವಿರುದ್ಧ ಕ್ವಾರ್ಟರ್ ಫೈನಲ್ ಪಂದ್ಯಕ್ಕೆ ಮುಂಬೈ ತಂಡ ಸಜ್ಜಾಗುತ್ತಿದೆ. ಈ ವೇಳೆ ಅಚಾನಕ್ ಆಗಿ ಭೇಟಿ ಕೊಟ್ಟ ಬ್ಯಾಟಿಂಗ್ ಮಾಂತ್ರಿಕ ಯಶಸ್ಸು ಪಡೆಯುವುದು ಹೇಗೆಂದು ಪಾಠ ಮಾಡಿದ್ದಾರೆ.

ಈ ಋತುವಿನಲ್ಲಿ ಮುಂಬೈ ಆರಂಭಿಕರ ವೈಫಲ್ಯಕ್ಕೊಳಗಾಗಿದೆ. ಇದೇ ವಿಷಯವಾಗಿ ಸಲಹೆ ಕೊಟ್ಟ ತೆಂಡುಲ್ಕರ್, “ಹಿಂದೆಯೂ ನಾವು ಇಂತಹ ಸಮಸ್ಯೆಗಳನ್ನು ಎದುರಿಸಿದ್ದೇವೆ. ಆದರೆ ಅದೇ ಒತ್ತಡವನ್ನು ಮೈಮೇಲೆಳೆದುಕೊಂಡಿಲ್ಲ. ಹಾಗಾಗಿ ಅದನ್ನು ಮರೆತು ಆರಾಮವಾಗಿ ಆಡಿ” ಎಂದು ತೆಂಡುಲ್ಕರ್ ಕಿವಿ ಮಾತು ಹೇಳಿದ್ದಾರೆ. ಅಲ್ಲದೆ ಸ್ವಲ್ಪ ಹೊತ್ತು ತಂಡದ ತರಬೇತಿ ನೋಡುತ್ತಾ ನಿಂತ ಸಚಿನ್ ಯುವ ಬ್ಯಾಟ್ಸ್ ಮನ್ ಗಳಾದ ಸೂರ್ಯಕುಮಾರ್ ಯಾದವ್, ಆದಿತ್ಯಾ ತಾರೆಗೆ ಕೆಲವು ಸಲಹೆ ಸೂಚನೆ ಕೊಟ್ಟರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments