Samit Dravid: ಭಾರತ ಅಂಡರ್ 19 ತಂಡಕ್ಕೆ ಆಯ್ಕೆಯಾದ ಮರಿ ದ್ರಾವಿಡ್

Krishnaveni K
ಶನಿವಾರ, 31 ಆಗಸ್ಟ್ 2024 (12:27 IST)
ಮುಂಬೈ: ಟೀಂ ಇಂಡಿಯಾ ವಾಲ್ ರಾಹುಲ್ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್ ಈಗ ಅಪ್ಪನ ಹಾದಿಯಲ್ಲಿದ್ದಾರೆ. ಭಾರತದ ಅಂಡರ್ 19 ತಂಡಕ್ಕೆ ಆಯ್ಕೆಯಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಅಂಡರ್ 19 ಸರಣಿಗೆ ಭಾರತದ ಕಿರಿಯರ ತಂಡ ಆಯ್ಕೆ ಮಾಡಲಾಗಿದ್ದು ರಾಹುಲ್ ದ್ರಾವಿಡ್ ಪುತ್ರ ಸಮಿತ್ ದ್ರಾವಿಡ್ ಕೂಡಾ ಆಯ್ಕೆಯಾಗಿದ್ದಾರೆ. ಈ ಸರಣಿಯಲ್ಲಿ ಏಕದಿನ ಮತ್ತು ಟೆಸ್ಟ್ ಪಂದ್ಯಗಳು ನಡೆಯಲಿವೆ. ಈ ತಂಡದಲ್ಲಿ ಸಮಿತ್ ಆಯ್ಕೆಯಾಗಿರುವುದು ವಿಶೇಷ.

ಏಕದಿನ ತಂಡದ ನಾಯಕನಾಗಿ ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಅಮಾನ್, ಟೆಸ್ಟ್ ತಂಡಕ್ಕೆ ಮಧ್ಯಪ್ರದೇಶದ ಸೋಹಮ್ ಪಟವರ್ಧನ್ ನಾಯಕರಾಗಿದ್ದಾರೆ. ಈ ತಂಡದಲ್ಲಿ ಸಮಿತ್ ದ್ರಾವಿಡ್ ಅಲ್ಲದೆ, ಕರ್ನಾಟಕದಿಂದ ಕಾರ್ತಿಕೇಯ ಕೆಪಿ, ಸಮರ್ಥ್, ಹಾರ್ದಿಕ್ ರಾಜ್ ಕೂಡಾ ಆಯ್ಕೆಯಾಗಿದ್ದಾರೆ.

ವಿಶೇಷವೆಂದರೆ ರಾಹುಲ್ ದ್ರಾವಿಡ್ ಕೂಡಾ ಇದೇ ಅಂಡರ್ 19 ತಂಡದ ಕೋಚ್ ಆಗಿ ಹಲವು ಯುವ ಕ್ರಿಕೆಟಿಗರನ್ನು ಭಾರತ ತಂಡಕ್ಕೆ ಕೊಡುಗೆಯಾಗಿ ನೀಡಿದ್ದರು. ಇದೀಗ ಅದೇ ತಂಡಕ್ಕೆ ಪುತ್ರ ಸಮಿತ್ ಆಟಗಾರನಾಗಿ ಆಯ್ಕೆಯಾಗಿದ್ದಾರೆ. ಮುಂದೆ ರಾಷ್ಟ್ರೀಯ ತಂಡ ಸೇರಿಕೊಳ್ಳುವ ನಿಟ್ಟಿನಲ್ಲಿ ಸಮಿತ್ ಗೆ ಇದು ಮೊದಲ ಹೆಜ್ಜೆಯಾಗಿರಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ಮುಂದಿನ ಸುದ್ದಿ
Show comments