Webdunia - Bharat's app for daily news and videos

Install App

ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳ ಮೇಲೆ ಸಿಟ್ಟಿಗೆದ್ದ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್!

Webdunia
ಸೋಮವಾರ, 3 ಜುಲೈ 2017 (14:50 IST)
ಪೋರ್ಟ್ ಆಫ್ ಸ್ಪೇನ್: ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ ನಾಲ್ಕನೇ ಏಕದಿನ ಪಂದ್ಯದಲ್ಲಿ ಭಾರತದ ನೀರಸ ಬ್ಯಾಟಿಂಗ್
ನೋಡಿ ಬ್ಯಾಟಿಂಗ್ ಕೋಚ್ ಸಂಜಯ್ ಬಂಗಾರ್ ಸಿಟ್ಟಿಗೆದ್ದಿದ್ದಾರೆ. ಬ್ಯಾಟ್ಸ್ ಮನ್ ಗಳೇ ಪಂದ್ಯ ಕೈ ಚೆಲ್ಲಿದರು ಎಂದು ಅವರು ಹತಾಶೆ ವ್ಯಕ್ತಪಡಿಸಿದ್ದಾರೆ.


ಚಾಂಪಿಯನ್ಸ್ ಟ್ರೋಫಿ ಫೈನಲ್ ನಲ್ಲಿ ಪಾಕ್ ವಿರುದ್ಧ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ್ದಕ್ಕೆ ಅಂದಿನ ಕೋಚ್ ಅನಿಲ್ ಕುಂಬ್ಳೆ ತೀರಾ ಸಿಟ್ಟಾಗಿದ್ದರು ಎಂದು ಹಿಂದೊಮ್ಮೆ ವರದಿಯಾಗಿತ್ತು. ಇದರ ಪರಿಣಾಮ ಏನಾಗಿತ್ತು ಎನ್ನುವುದು ಎಲ್ಲರಿಗೂ ಗೊತ್ತಿರುವುದೇ.

ಇದೀಗ ಸದಾ ಶಾಂತ ಸ್ವಭಾವದವರೆಂದು ಅಂದುಕೊಂಡಿರುವ ಸಂಜಯ್ ಬಂಗಾರ್ ಸರದಿ. ‘ಇಲ್ಲಿನ ವಿಕೆಟ್ ನಲ್ಲಿ ಹೊಡೆತಕ್ಕೆ ಕೈ ಹಾಕಲು ಸುಲಭವಾಗಿರಲಿಲ್ಲ ಎನ್ನುವುದು ಒಪ್ಪುವಂತಹದ್ದೇ. ಆದರೆ 190 ರನ್ ಗಳನ್ನು ಚೇಸ್ ಮಾಡಲು ಅಸಾಧ್ಯವೇನೂ ಆಗಿರಲಿಲ್ಲ. ಆದರೂ ನಮ್ಮ ಬ್ಯಾಟ್ಸ್ ಮನ್ ಗಳೇ ಸುಲಭವಾಗಿ ವಿಕೆಟ್ ಕೈ ಚೆಲ್ಲಿದರು. ಇಂತಹ ಪರಿಸ್ಥಿತಿಯನ್ನು ಸಾಕಷ್ಟು ಎದುರಿಸಿ ಗೆದ್ದಿದ್ದೇವೆ. ಆದರೂ ಇಂದು ಸೋತಿದ್ದಕ್ಕೆ ನೆಪ ಹೇಳಲು ಸಾಧ್ಯವೇ ಇಲ್ಲ’ ಎಂದು ಬಂಗಾರ್ ಹತಾಶೆಯಿಂದ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

IND vs ENG:ಟೀಂ ಇಂಡಿಯಾ ಕ್ಯಾಪ್ಟನ್ ಶುಭಮನ್ ಗಿಲ್ ಟಾಸ್ ಸೋಲುವುದರಲ್ಲೇ ದಾಖಲೆ

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ಮುಂದಿನ ಸುದ್ದಿ
Show comments