Webdunia - Bharat's app for daily news and videos

Install App

ಕ್ರಿಕೆಟಿಗ ವೃದ್ಧಿಮಾನ್ ಸಹಾಗೆ ಬೆದರಿಕೆ: ಭಜಿ, ಸೆಹ್ವಾಗ್ ಬೆಂಬಲ

Webdunia
ಭಾನುವಾರ, 20 ಫೆಬ್ರವರಿ 2022 (16:47 IST)
ಮುಂಬೈ: ಟೀಂ ಇಂಡಿಯಾದಿಂದ ಕೈ ಬಿಟ್ಟಿದ್ದಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಕ್ಕೆ ಪತ್ರಕರ್ತರೊಬ್ಬರು ತನಗೆ ಬೆದರಿಕೆ ಸಂದೇಶ ಕಳುಹಿಸಿದ್ದನ್ನು ವಿಕೆಟ್ ಕೀಪರ್ ವೃದ್ಧಿಮಾನ್ ಸಹಾ ಬಹಿರಂಗಪಡಿಸಿದ್ದರು. ಇದರ ಬೆನ್ನಲ್ಲೇ ಕ್ರಿಕೆಟಿಗರಾದ ಹರ್ಭಜನ್ ಸಿಂಗ್, ವೀರೇಂದ್ರ ಸೆಹ್ವಾಗ್ ಸಹಾಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಟೀಂ ಇಂಡಿಯಾದಿಂದ ಕೈ ಬಿಟ್ಟಿದ್ದರ ಬಗ್ಗೆ ಪ್ರತಿಕ್ರಿಯೆ ಕೊಡಿ ಎಂದಾಗ ಸಹಾ ಪ್ರತಿಕ್ರಿಯಿಸಲಿಲ್ಲ ಎಂಬ ಕಾರಣಕ್ಕೆ ಪತ್ರಕರ್ತರೊಬ್ಬರು ವೃದ್ಧಿಮಾನ್ ಸಹಾಗೆ ಬೆದರಿಕೆ ಸಂದೇಶ ಕಳುಹಿಸಿದ್ದರಂತೆ. ನೀವು ನನ್ನ ಕರೆಗೆ ಉತ್ತರಿಸದೇ ಅವಮಾನ ಮಾಡಿದ್ದೀರಿ. ಇದಕ್ಕೆ ತಕ್ಕ ಫಲ ಅನುಭವಿಸಬೇಕಾಗುತ್ತದೆ ಎಂದು ಪತ್ರಕರ್ತರೊಬ್ಬರು ಸಂದೇಶ ಕಳುಹಿಸಿದ್ದನ್ನು ಸಹಾ ಸ್ಕ್ರೀನ್ ಶಾಟ್ ಸಮೇತ ಬಹಿರಂಗಪಡಿಸಿದ್ದಾರೆ.

ಈ ಬೆಳವಣಿಗೆ ಹಿನ್ನಲೆಯಲ್ಲಿ ಹರ್ಭಜನ್, ಸೆಹ್ವಾಗ್ ಟ್ವಿಟರ್ ಮೂಲಕ ಸಹಾಗೆ ಬೆಂಬಲ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ. ಇಂತಹ ಪತ್ರಕರ್ತ ಯಾರು ಎಂಬುದನ್ನು ಬಹಿರಂಗಪಡಿಸಿ ಎಂದು ಭಜಿ ಆಗ್ರಹಿಸಿದರೆ, ಇಂತಹವರೆಲ್ಲಾ ಪತ್ರಕರ್ತರಲ್ಲ, ಚಮಚಾಗಳು ಎಂದು ಸೆಹ್ವಾಗ್ ಕಿಡಿ ಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments