ತಂದೆಗೆ ತಕ್ಕ ಮಗ! ಕರ್ನಾಟಕ ವಿರುದ್ಧದ ಪಂದ್ಯದಲ್ಲಿ ಭರ್ಜರಿ ಅರ್ಧಶತಕ ಸಿಡಿಸಿದ ಸೆಹ್ವಾಗ್ ಪುತ್ರ

Webdunia
ಬುಧವಾರ, 13 ಡಿಸೆಂಬರ್ 2023 (10:21 IST)
Photo Courtesy: Twitter
ನವದೆಹಲಿ: ಒಂದು ಕಾಲದಲ್ಲಿ ಟೀಂ ಇಂಡಿಯಾದಲ್ಲಿ ಹೊಡೆಬಡಿಯ ಆಟದ ಮೂಲಕ ಸಿಡಿಲಮರಿ ಎಂದೇ ಕರೆಯಿಸಿಕೊಳ್ಳುತ್ತಿದ್ದ ವೀರೇಂದ್ರ ಸೆಹ್ವಾಗ್ ಯಾರಿಗೆ ನೆನಪಿಲ್ಲ ಹೇಳಿ? ಅವರ ಪುತ್ರ ಆರ್ಯವೀರ್ ಈಗ ತಂದೆಯದ್ದೇ ಹಾದಿಯಲ್ಲಿದ್ದಾನೆ.

ವಿಜಯ್ ಮರ್ಚೆಂಟ್ ಟ್ರೋಫಿ ಅಂಡರ್ 16 ಟೂರ್ನಿಯಲ್ಲಿ ಕರ್ನಾಟಕದ ವಿರುದ್ಧದ ಪಂದ್ಯದಲ್ಲಿ ದೆಹಲಿ ಪರ ಆಡಿದ ಸೆಹ್ವಾಗ್ ಪುತ್ರ ಆರ್ಯವೀರ್ ಮೊದಲ ದಿನವೇ ಅಜೇಯ 54 ರನ್ ಗಳಿಸಿ ಮಿಂಚಿದರು. ಅವರ ಇನಿಂಗ್ಸ್ ನಲ್ಲಿ 8 ಬೌಂಡರಿ, ಒಂದು ಸಿಕ್ಸರ್ ಕೂಡಾ ಸೇರಿತ್ತು. ತಂದೆಯಂತೇ ಸಿಡಿಲಬ್ಬರದ ಇನಿಂಗ್ಸ್ ಆಡಿ ಗಮನ ಸೆಳೆದರು.

ಮೂರು ದಿನಗಳ ಟೂರ್ನಿ ಇದಾಗಿದ್ದು, ಕರ್ನಾಟಕ ತಂಡಕ್ಕೆ ರಾಹುಲ್ ದ್ರಾವಿಡ್ ಪುತ್ರ ಅನ್ವಯ್ ನಾಯಕತ್ವವಿದೆ. ಒಂದೆಡೆ ಸೆಹ್ವಾಗ್ ಪುತ್ರ ಮಿಂಚಿದರೆ ಇತ್ತ ಕರ್ನಾಟಕದ ಪರ ಆಡುತ್ತಿರುವ ದ್ರಾವಿಡ್ ಪುತ್ರ ಶೂನ್ಯಕ್ಕೆ ನಿರ್ಗಮಿಸಿ ನಿರಾಸೆ ಮೂಡಿಸಿದರು. ಆದರೆ ಎರಡನೇ ಇನಿಂಗ್ಸ್ ನಲ್ಲಿ ಅವರು ಆಡುವ ನಿರೀಕ್ಷೆಯಿದೆ.

ಒಂದು ಕಾಲದಲ್ಲಿ ಟೀಂ ಇಂಡಿಯಾದ ಬಲಾಢ್ಯ ಬ್ಯಾಟಿಗರಾಗಿದ್ದ ದ್ರಾವಿಡ್-ಸೆಹ್ವಾಗ್ ಪುತ್ರರು ಈಗ ದೇಶೀಯ ಕ್ರಿಕೆಟ್ ನಲ್ಲಿ ಮಿಂಚುತ್ತಿರುವುದು ವಿಶೇಷ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್‌ ಕೊಹ್ಲಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಆಲೂರಿನಲ್ಲಿ ಕಣಕ್ಕಿಳಿಯಲಿದ್ದಾರೆ ಭಾರತದ ಸ್ಟಾರ್‌ ಬ್ಯಾಟರ್‌

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ಮುಂದಿನ ಸುದ್ದಿ
Show comments