ಕಾಶ್ಮೀರ ವಿಚಾರದಲ್ಲಿ ಮತ್ತೆ ಕ್ರಿಕೆಟಿಗ ಶಾಹಿದ್ ಅಫ್ರಿದಿ ಕಿರಿಕ್

Webdunia
ಬುಧವಾರ, 4 ಏಪ್ರಿಲ್ 2018 (09:35 IST)
ಕರಾಚಿ: ಇತ್ತೀಚೆಗಷ್ಟೇ ಭಾರತೀಯ ಧ್ವಜದ ಜತೆಗೆ ಅಭಿಮಾನಿಯೊಬ್ಬರ ಜತೆಗೆ ಫೋಟೋ ತೆಗೆಸಿಕೊಂಡು ಮೆಚ್ಚುಗೆಗೆ ಪಾತ್ರರಾಗಿದ್ದ ಪಾಕಿಸ್ತಾನ ಕ್ರಿಕೆಟಿಗ ಶಾಹಿದ್ ಅಫ್ರಿದಿ ಇದೀಗ ಕಾಶ್ಮೀರ ವಿಚಾರದಲ್ಲಿ ಭಾರತ ವಿರೋಧಿ ಹೇಳಿಕೆ ನೀಡಿ ತಿರುಗೇಟು ಪಡೆದುಕೊಂಡಿದ್ದಾರೆ.

‘ಭಾರತ ಸ್ವಾಧೀನದಲ್ಲಿರುವ ಕಾಶ್ಮೀರದಲ್ಲಿ ಅಮಾಯಕರ ರಕ್ತಪಾತ ನಿಲ್ಲಬೇಕು. ವಿಶ್ವಸಂಸ್ಥೆ ಅಂಗ ಸಂಸ್ಥೆಗಳು ಈಗ ಯಾಕೆ ಮೌನವಾಗಿದೆ? ಈ ವಿಚಾರದ ಬಗ್ಗೆ ಯಾಕೆ ಗಮನ ಹರಿಸುತ್ತಿಲ್ಲ?’ ಎಂದು ಶಾಹಿದ್ ಅಫ್ರಿದಿ ವಿವಾದಾತ್ಮಕ ಟ್ವೀಟ್ ಮಾಡಿದ್ದರು.

ಇದಕ್ಕೆ ಕ್ರಿಕೆಟಿಗ ಗೌತಮ್ ಗಂಭೀರ್ ಸೇರಿದಂತೆ ಭಾರತೀಯ ಅಭಿಮಾನಿಗಳು ತಕ್ಕ ತಿರುಗೇಟು ನೀಡಿದ್ದಾರೆ. ‘ಮಾಧ್ಯಮಗಳು ಅಫ್ರಿದಿ ಹೇಳಿಕೆಗೆ ನನ್ನ ಪ್ರತಿಕ್ರಿಯೆ ಕೇಳಿ ಫೋನ್ ಮಾಡಿದ್ದವು. ಏನೆಂದು ಹೇಳಲಿ? ಅಫ್ರಿದಿ ಹೇಳಿದ ಯುಎನ್ ಶಬ್ಧದ ಇನ್ನೊಂದು ಅರ್ಥ ಅಂಡರ್ ನೈಂಟೀನ್. ಅಂಡರ್ ನೈಂಟೀನ್ ಅವರ ವಯಸ್ಸು ಎಂದು ಸೂಚಿಸುತ್ತದೆ. ಮಾಧ್ಯಮಗಳು ನಿರಾಳವಾಗಿರಬಹುದು. ಶಾಹಿದ್ ಅಫ್ರಿದಿ ನೋ ಬಾಲ್ ತಾವು ಔಟಾಗಿರುವುದನ್ನು ಸಂಭ್ರಮಿಸುತ್ತಿದ್ದಾರೆ’ ಎಂದು ಗಂಭೀರ್ ತಕ್ಕ ತಿರುಗೇಟು ನೀಡಿದ್ದಾರೆ.  ಇದೇ ರೀತಿ ಟ್ವಿಟರ್ ನಲ್ಲಿ ಹಲವರು ಶಾಹಿದ್ ಅಫ್ರಿದಿಗೆ ಏಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ಮುಂದಿನ ಸುದ್ದಿ
Show comments