Webdunia - Bharat's app for daily news and videos

Install App

ಕೊಚ್ಚಿಯಲ್ಲಿ ಟೀಂ ಇಂಡಿಯಾ ಪಂದ್ಯ ಆಯೋಜಿಸುವುದಕ್ಕೆ ಸಂಸದ ಶಶಿ ತರೂರ್ ವಿರೋಧವೇಕೆ?!

Webdunia
ಬುಧವಾರ, 21 ಮಾರ್ಚ್ 2018 (09:23 IST)
ಕೊಚ್ಚಿ: ತಿರುವನಂತಪುರಂ ಸಂಸದ ಶಶಿ ತರೂರ್ ಮುಂಬರುವ ನವಂಬರ್ ನಲ್ಲಿ ಕೊಚ್ಚಿ ಕ್ರೀಡಾಂಗಣದಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆಸಲುದ್ದೇಶಿಸಿರುವ ಏಕದಿನ ಪಂದ್ಯಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ.
 

ತರೂರ್ ಟ್ವಿಟರ್ ನಲ್ಲಿ ವಿರೋಧ ವ್ಯಕ್ತಪಡಿಸಿರುವುದಕ್ಕೆ ಹಲವರು ಅವರನ್ನು ಬೆಂಬಲಿಸಿದ್ದಾರೆ. ಈ ವಿರೋಧಕ್ಕೆ ಬಲವಾದ ಕಾರಣವೂ ಇದೆ. ಕೊಚ್ಚಿಯಲ್ಲಿ ಈಗ ಫುಟ್ ಬಾಲ್ ಪಂದ್ಯಕ್ಕೆ ಬೇಕಾದ ಟರ್ಫ್ ಸಿದ್ಧಪಡಿಸಲಾಗಿದೆ. ಈಗ ಕ್ರಿಕೆಟ್ ಪಂದ್ಯ ಆಯೋಜಿಸಬೇಕಾದರೆ ಈ ಮೈದಾನ ಅಗೆದು ಪಿಚ್ ನಿರ್ಮಿಸಬೇಕು.

ಕೇರಳದಲ್ಲಿ ಕ್ರಿಕೆಟ್ ಗಿಂತ ಫುಟ್ ಬಾಲ್ ಹೆಚ್ಚು ಜನಪ್ರಿಯ. ಒಂದು ವೇಳೆ ಕ್ರಿಕೆಟ್ ಪಂದ್ಯ ಆಯೋಜಿಸಬೇಕಾದರೆ ತಿರುವನಂತಪುರಂನ ಮೈದಾನದಲ್ಲಿ ಕ್ರಿಕೆಟ್ ಪಿಚ್ ಸಿದ್ಧವಿದೆ. ಅಲ್ಲಿಯೇ ಆಯೋಜಿಸುವ ಬದಲು ದಿಡೀರ್ ಎಂದು ಕೊಚ್ಚಿಗೆ ಪಂದ್ಯ ವರ್ಗಾಯಿಸಿರುವುದರ ಒಳಮರ್ಮವೇನೆಂದು ಶಶಿ ತರೂರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂತಹ ಅನುಮಾಸ್ಪದ ನಿರ್ಧಾರದಿಂದ ಯಾರಿಗೆ ಲಾಭ ಎಂದು ಅವರು ಟ್ವಿಟರ್ ನಲ್ಲಿ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments