Select Your Language

Notifications

webdunia
webdunia
webdunia
webdunia

ರವಿಚಂದ್ರನ್ ಅಶ್ವಿನ್ ಕೈಬಿಟ್ಟಿದ್ದಕ್ಕೆ ಸಂಸದ ಶಶಿ ತರೂರ್ ಪ್ರತಿಕ್ರಿಯೆ

ರವಿಚಂದ್ರನ್ ಅಶ್ವಿನ್ ಕೈಬಿಟ್ಟಿದ್ದಕ್ಕೆ ಸಂಸದ ಶಶಿ ತರೂರ್ ಪ್ರತಿಕ್ರಿಯೆ
ನವದೆಹಲಿ , ಶುಕ್ರವಾರ, 3 ಸೆಪ್ಟಂಬರ್ 2021 (08:58 IST)
ನವದೆಹಲಿ: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ನಿಂದ ಟೀಂ ಇಂಡಿಯಾ ರವಿಚಂದ್ರನ್ ಅಶ್ವಿನ್ ರನ್ನು ಹೊರಗಿಟ್ಟಿರುವುದಕ್ಕೆ ಸಂಸದ ಶಶಿ ತರೂರ್ ಅಚ್ಚರಿ ವ್ಯಕ್ತಪಡಿಸಿದ್ದಾರೆ.


ಅಶ್ವಿನ್ ಮತ್ತು ಮೊಹಮ್ಮದ್ ಶಮಿಯನ್ನು ಹೊರಗಿಟ್ಟ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ನಿರ್ಧಾರವನ್ನು ಶಶಿ ತರೂರ್ ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ.

‘ಸ್ಪಿನ್ ಸ್ನೇಹೀ ಮೈದಾನದಲ್ಲಿ ಅಶ್ವಿನ್ ರನ್ನು ಮತ್ತೆ ತಂಡದಿಂದ ಹೊರಗಿಟ್ಟಿರುವುದಕ್ಕೆ ಅಚ್ಚರಿಯಾಗುತ್ತಿದೆ. ಈ ತಂಡವೇ ಅಚ್ಚರಿಯೆನಿಸಿದೆ. ನಿಮ್ಮ ಬೆಸ್ಟ್ ಬೌಲರ್ ಗಳ ಪಟ್ಟಿಯಲ್ಲಿ ಅಶ್ವಿನ್ ಮೊದಲ ಅಥವಾ ದ್ವಿತೀಯ ಸ್ಥಾನದಲ್ಲಿರುತ್ತಾರೆ. ಅವರನ್ನು ಮತ್ತು ಶಮಿಯನ್ನು ತಂಡದಿಂದ ಹೊರಗಿಟ್ಟಿರುವುದು ಸೋಲೆಂಬ ಸಾವನ್ನು ಆಹ್ವಾನಿಸಿದಂತೆ’ ಎಂದು ಶಶಿ ತೂರರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂಗ್ಲೆಂಡ್ ವಿರುದ್ಧ ಟೀಂ ಇಂಡಿಯಾ ಸ್ವೀಟ್ ರಿವೆಂಜ್