Webdunia - Bharat's app for daily news and videos

Install App

ಶಿಖರ್ ಧವನ್ ಇಲ್ಲದೇ ಹೋಗಿದ್ದರೆ ಟೀಂ ಇಂಡಿಯಾ ಕತೆ ಗೋವಿಂದಾ..!

Webdunia
ಶುಕ್ರವಾರ, 9 ಮಾರ್ಚ್ 2018 (09:00 IST)
ಕೊಲೊಂಬೊ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಿನ್ನೆ ನಡೆದ ಟಿ20 ಪಂದ್ಯದಲ್ಲಿ ಹಾಗೂ ಹೀಗೂ ಪ್ರಯಾಸದಿಂದ ಟೀಂ ಇಂಡಿಯಾ 6 ವಿಕೆಟ್ ಗಳ ಗೆಲುವು ಸಾಧಿಸಿದೆ.

ಮೊದಲ ಬ್ಯಾಟ್ ಮಾಡಿದ್ದ ಬಾಂಗ್ಲಾ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿತ್ತು. ಭಾರತದ ಪರ ಯುವ ಬೌಲರ್ ಜಯದೇವ್ ಉನಾದ್ಕಟ್ 3, ವಿಜಯ್ ಶಂಕರ್ 2 ವಿಕೆಟ್ ಕಿತ್ತರು.

ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ರೋಹಿತ್ ಶರ್ಮಾ ಯಥಾವತ್ತು ಕೈ ಕೊಟ್ಟರು. 17 ರನ್ ಗಳಿಸಿ ಔಟಾದರು. ನಂತರ ಎಂದಿನಂತೆ ಶಿಖರ್ ಧವನ್ ಆಸರೆಯಾದರು. ಕಳೆದ ಪಂದ್ಯದಂತೆ ಮತ್ತೊಂದು ಅರ್ಧಶತಕ ಸಿಡಿಸಿದ ಧವನ್ 55 ರನ್ ಗಳಿಗೆ ಔಟಾದರು. ಈ ವೇಳೆ ಅನುಭವಿ ರೈನಾ 26 ರನ್ ಗಳಿಸಿದರೆ ರಿಷಬ್ ಪಂತ್ ಮತ್ತೆ 7 ರನ್ ಗೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು.

ಬಳಿಕ ಮನೀಶ್ ಪಾಂಡೆ 19 ಬಾಲ್ ಗಳಲ್ಲಿ ಬಿರುಸಿನ 27 ರನ್ ಗಳಿಸಿ ತಂಡಕ್ಕೆ ಗೆಲುವಿನ ರನ್ ನೀಡಿದರು. ಅಂತಿಮವಾಗಿ ಭಾರತ 18.2 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿತು. ಗಮನಾರ್ಹ ಬೌಲಿಂಗ್ ಪ್ರದರ್ಶಿಸಿದ ವಿಜಯ್ ಶಂಕರ್ ಪಂದ್ಯ ಶ್ರೇಷ್ಠರಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಟೀಂ ಇಂಡಿಯಾ ಗೆಲ್ಲದಂತೆ ಪಿಚ್ ಕ್ಯುರೇಟರ್ ಮಾಡಿದ್ದ ಕುತಂತ್ರವೇನು ಗೊತ್ತಾ

ಮೊಹಮ್ಮದ್ ಸಿರಾಜ್ ಯಾರ್ಕರ್ ನಿಂದ ಇವರೆಲ್ಲರ ವೃತ್ತಿ ಜೀವನ ಬಚಾವ್ ಆಯ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಮುಂದಿನ ಸುದ್ದಿ
Show comments