Webdunia - Bharat's app for daily news and videos

Install App

ಶಿಖರ್ ಧವನ್ ಇಲ್ಲದೇ ಹೋಗಿದ್ದರೆ ಟೀಂ ಇಂಡಿಯಾ ಕತೆ ಗೋವಿಂದಾ..!

Webdunia
ಶುಕ್ರವಾರ, 9 ಮಾರ್ಚ್ 2018 (09:00 IST)
ಕೊಲೊಂಬೊ: ಭಾರತ ಮತ್ತು ಬಾಂಗ್ಲಾದೇಶ ನಡುವೆ ನಿನ್ನೆ ನಡೆದ ಟಿ20 ಪಂದ್ಯದಲ್ಲಿ ಹಾಗೂ ಹೀಗೂ ಪ್ರಯಾಸದಿಂದ ಟೀಂ ಇಂಡಿಯಾ 6 ವಿಕೆಟ್ ಗಳ ಗೆಲುವು ಸಾಧಿಸಿದೆ.

ಮೊದಲ ಬ್ಯಾಟ್ ಮಾಡಿದ್ದ ಬಾಂಗ್ಲಾ ನಿಗದಿತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಿತ್ತು. ಭಾರತದ ಪರ ಯುವ ಬೌಲರ್ ಜಯದೇವ್ ಉನಾದ್ಕಟ್ 3, ವಿಜಯ್ ಶಂಕರ್ 2 ವಿಕೆಟ್ ಕಿತ್ತರು.

ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತಕ್ಕೆ ರೋಹಿತ್ ಶರ್ಮಾ ಯಥಾವತ್ತು ಕೈ ಕೊಟ್ಟರು. 17 ರನ್ ಗಳಿಸಿ ಔಟಾದರು. ನಂತರ ಎಂದಿನಂತೆ ಶಿಖರ್ ಧವನ್ ಆಸರೆಯಾದರು. ಕಳೆದ ಪಂದ್ಯದಂತೆ ಮತ್ತೊಂದು ಅರ್ಧಶತಕ ಸಿಡಿಸಿದ ಧವನ್ 55 ರನ್ ಗಳಿಗೆ ಔಟಾದರು. ಈ ವೇಳೆ ಅನುಭವಿ ರೈನಾ 26 ರನ್ ಗಳಿಸಿದರೆ ರಿಷಬ್ ಪಂತ್ ಮತ್ತೆ 7 ರನ್ ಗೆ ವಿಕೆಟ್ ಒಪ್ಪಿಸಿ ನಿರಾಸೆ ಮೂಡಿಸಿದರು.

ಬಳಿಕ ಮನೀಶ್ ಪಾಂಡೆ 19 ಬಾಲ್ ಗಳಲ್ಲಿ ಬಿರುಸಿನ 27 ರನ್ ಗಳಿಸಿ ತಂಡಕ್ಕೆ ಗೆಲುವಿನ ರನ್ ನೀಡಿದರು. ಅಂತಿಮವಾಗಿ ಭಾರತ 18.2 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 140 ರನ್ ಗಳಿಸಿತು. ಗಮನಾರ್ಹ ಬೌಲಿಂಗ್ ಪ್ರದರ್ಶಿಸಿದ ವಿಜಯ್ ಶಂಕರ್ ಪಂದ್ಯ ಶ್ರೇಷ್ಠರಾದರು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments