Webdunia - Bharat's app for daily news and videos

Install App

ಕೊಟ್ಟ ಮಾತು ಉಳಿಸಿಕೊಂಡ ಶಿಖರ್ ಧವನ್

Webdunia
ಸೋಮವಾರ, 12 ಜೂನ್ 2017 (08:24 IST)
ಲಂಡನ್: ಚಾಂಪಿಯನ್ಸ್ ಟ್ರೋಫಿಯಲ್ಲಿ ಶ್ರೀಲಂಕಾ ವಿರುದ್ಧ ಆಘಾತಕಾರಿಯಾಗಿ ಸೋತ ಮೇಲೆ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಮುಂದಿನ ಪಂದ್ಯದಲ್ಲಿ ವೈವಿದ್ಯ ರಣತಂತ್ರದೊಂದಿಗೆ ಕಣಕ್ಕಿಳಿದು ಗೆದ್ದು ತೋರಿಸುತ್ತೇವೆ ಎಂದು ಭರವಸೆ ನೀಡಿದ್ದರು.

 
ಅದನ್ನು ಅವರು ಉಳಿಸಿಕೊಂಡಿದ್ದಾರೆ. ಸ್ವತಃ ತಾವೇ ನಿಂತು ತಂಡವನ್ನು ದಡ ಸೇರಿಸುವ ಕೆಲಸ ಮಾಡಿದ್ದಾರೆ. ಇದರಿಂದಾಗಿ ಚಾಂಪಿಯನ್ಸ್ ಟ್ರೋಫಿ ಕೂಟದಲ್ಲಿ ನಾಲ್ಕನೇ ಬಾರಿಗೆ ಟೀಂ ಇಂಡಿಯಾ ದ.ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಗೆದ್ದು ಮೆರೆದಿದೆ. ನಿನ್ನೆ ನಡೆದ ಪಂದ್ಯದಲ್ಲಿ 8 ವಿಕೆಟ್ ಗಳ ಭರ್ಜರಿ ಜಯದೊಂದಿಗೆ ಸೆಮಿಫೈನಲ್ ಗೆ ಲಗ್ಗೆಯಿಟ್ಟಿದೆ.

192 ರನ್ ಗಳ ಅಲ್ಪ ಮೊತ್ತ ಬೆಂಬತ್ತಿದ ಭಾರತಕ್ಕೆ ರೋಹಿತ್ ಶರ್ಮಾ ಬಹುಬೇಗನೇ ಔಟಾಗುವ ಮೂಲಕ ಆಘಾತ ನೀಡಿದರು. ಆದರೆ ನಂತರ ಬಂದ ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ತಂಡವನ್ನು ಗೆಲುವಿನಂಚಿಗೆ ತಲುಪಿಸಿದರು. ಆದರೆ ಅಷ್ಟರಲ್ಲಿ 78 ರನ್ ಗಳಿಸಿದ್ದ ಧವನ್ ಔಟಾದರು.

ಹಾಗಿದ್ದರೂ ಭಾರತಕ್ಕೆ ಹೆಚ್ಚಿನ ಆಘಾತವಾಗಲಿಲ್ಲ. ಆರಂಭದಲ್ಲಿ ಕೊಂಚ ತಿಣುಕಾಡಿದರೂ, ನಂತರ ಲಯಕ್ಕೆ ಮರಳಿದ ಕೊಹ್ಲಿ ತಮ್ಮ ಎಂದಿನ ಹೊಡೆತಗಳನ್ನು ಬಾರಿಸುವ ಮೂಲಕ ಮತ್ತೊಮ್ಮೆ ತಾನೊಬ್ಬ ಚೇಸಿಂಗ್ ವೀರ ಎಂದು ಸಾಬೀತು ಪಡಿಸಿದರು. ಕೊನೆಯಲ್ಲಿ ಬಂದ ಯುವರಾಜ್ ಸಿಂಗ್ ಗೆಲುವಿನ ಸಿಕ್ಸರ್ ಸಿಡಿಸಿದರು.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments