Webdunia - Bharat's app for daily news and videos

Install App

ಭಾರತ-ಪಾಕ್ ಕ್ರಿಕೆಟ್ ವಿರೋಧಿಸಿ ಮುಂಬೈನಲ್ಲಿ ಬಿಸಿಸಿಐ ಕಚೇರಿಗೆ ಮುತ್ತಿಗೆ

Webdunia
ಸೋಮವಾರ, 19 ಅಕ್ಟೋಬರ್ 2015 (11:30 IST)
ಭಾರತ ಮತ್ತು ಕ್ರಿಕೆಟ್ ಸರಣಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಶಿವಸೇನೆ  ಮುಂಬೈನಲ್ಲಿ ಬಿಸಿಸಿಐ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದೆ.  ಪಾಕ್ ಕ್ರಿಕೆಟ್ ಮಂಡಳಿ ಅಧ್ಯಕ್ಷ ಶಹರ್ ಯಾರ್ ಖಾನ್ ಮತ್ತು ಬಿಸಿಸಿಐ ಅಧ್ಯಕ್ಷ ಶಶಾಂಕ್ ಮನೋಹರ್ ನಡುವೆ ಇಂದು ಮೀಟಿಂಗ್ ನಿಗದಿಯಾಗಿತ್ತು. ಆದರೆ ಯಾವುದೇ ಕಾರಣಕ್ಕೂ ತಾವು ಭಾರತ ಮತ್ತು ಪಾಕ್ ನಡುವೆ ಕ್ರಿಕೆಟ್ ಪಂದ್ಯಕ್ಕೆ ಅವಕಾಶ ಕೊಡುವುದಿಲ್ಲ ಎಂದು ಶಿವಸೇನೆ ಕಾರ್ಯಕರ್ತರು ಹೇಳಿದ್ದಾರೆ.

ನಿಗದಿಯಾಗಿರುವ ಸಭೆಯನ್ನು ಇಂದು ನಡೆಸಬಾರದು ಎಂದೂ ಶಿವಸೇನೆ ಕಾರ್ಯಕರ್ತರು ಒತ್ತಾಯಿಸಿದರು. ಪಾಕಿಸ್ತಾನ ಭಾರತದಲ್ಲಿ ಭಯೋತ್ಪಾದನೆಗೆ ಕುಮ್ಮಕ್ಕು ನೀಡುತ್ತಿರುವುದರಿಂದ ಭಾರತ ಮತ್ತು ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯಗಳಿಗೆ ವಿರೋಧ ವ್ಯಕ್ತವಾಗಿತ್ತು.   ಪಾಕಿಸ್ತಾನ ಭಾರತದ ವಿರುದ್ಧ ಎಲ್ಲಾ ಅಂತಾರಾಷ್ಟ್ರೀಯ ಪಂದ್ಯಗಳನ್ನು ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿತ್ತು.  

ಶಶಾಂಕ್ ಮನೋಹರ್ ಶಹರ್ ಯಾರ್ ಖಾನ್‌ಗೆ ಕರೆ ಮಾಡಿ ಮಾತುಕತೆಗೆ ಭೇಟಿ ನೀಡುವಂತೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಮುಂಬೈನಲ್ಲಿ ಭೇಟಿ ನಿಗದಿಯಾಗಿತ್ತು. ಆದರೆ ಶಿವಸೇನೆ ಪ್ರತಿಭಟನೆ ಹಿನ್ನೆಲೆಯಲ್ಲಿ ಬಿಸಿಸಿಐ ಸಭೆ ರದ್ದುಮಾಡಲಾಗಿದೆ. 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments