Webdunia - Bharat's app for daily news and videos

Install App

ಪಾಕಿಸ್ತಾನ ತಂಡ ಭಾರತಕ್ಕೆ ಹೋಗಿ ಅಲ್ಲಿಯೇ ಅವರನ್ನು ಸೋಲಿಸಿ ಬರಬೇಕು: ಶೊಯೇಬ್ ಅಖ್ತರ್

Krishnaveni K
ಸೋಮವಾರ, 2 ಡಿಸೆಂಬರ್ 2024 (17:32 IST)
Photo Credit: X
ಇಸ್ಲಾಮಾಬಾದ್: ಪಾಕಿಸ್ತಾನ ತಂಡ ಭಾರತಕ್ಕೆ ಹೋಗಬೇಕು, ಆ ಬಳಿಕ ಅವರನ್ನು ಅಲ್ಲಿಯೇ ಸೋಲಿಸಿ ಬರಬೇಕು. ಹೀಗಂತ ಪಾಕ್ ಮಾಜಿ  ವೇಗಿ ಶೊಯೇಬ್ ಅಖ್ತರ್ ಹೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಪಂದ್ಯವನ್ನು ಹೈಬ್ರಿಡ್ ಮಾದರಿಯಲ್ಲಿ ನಡೆಸಲು ಒಪ್ಪಿಗೆ ನೀಡಿದ ಬೆನ್ನಲ್ಲೇ ಪಿಸಿಬಿ ಕೆಲವು ಷರತ್ತುಗಳನ್ನು ಐಸಿಸಿ ಮುಂದಿಟ್ಟಿತ್ತು. ಇದರಲ್ಲಿ ಭಾರತ ಆತಿಥ್ಯ ವಹಿಸುವ ಐಸಿಸಿ ಟೂರ್ನಿಗಳನ್ನೂ ಹೈಬ್ರಿಡ್ ಮಾದರಿಯಲ್ಲಿ ನಡೆಸಬೇಕು, ಪಾಕಿಸ್ತಾನ ತಂಡ ಭಾರತಕ್ಕೆ ಹೋಗಲ್ಲ ಮತ್ತು ಐಸಿಸಿ ಆದಾಯದ ಪಾಲಿನಲ್ಲಿ ಹೆಚ್ಚಳ ಮಾಡಬೇಕು ಎಂದಿತ್ತು.

ಈ ಬಗ್ಗೆ ಪ್ರತಿಕ್ರಿಯಿಸಿರುವ ಶೊಯೇಬ್ ಅಖ್ತರ್, ಪಿಸಿಬಿ ವಿಧಿಸಿರುವ ಷರತ್ತುಗಳಲ್ಲಿ ಆದಾಯದ ಪಾಲು ಹೆಚ್ಚಳ ಮತ್ತು ಹೈಬ್ರಿಡ್ ಮಾದರಿಯನ್ನು ಒಪ್ಪಬಹುದು. ಆದರೆ ಪಾಕಿಸ್ತಾನ ತಂಡ ಭಾರತಕ್ಕೆ ಹೋಗುವುದಿಲ್ಲ ಎನ್ನುವುದನ್ನು ಒಪ್ಪಿಕೊಳ್ಳಲಾಗದು. ನಾವು ಯಾಕೆ ಹೋಗಬಾರದು? ಪಾಕಿಸ್ತಾನ ತಂಡ ಭಾರತಕ್ಕೆ ಹೋಗಬೇಕು. ಭಾರತದ ನೆಲದಲ್ಲಿಯೇ ಅವರನ್ನು ಸೋಲಿಸಿ ಬರಬೇಕು ಎಂದು ಅಖ್ತರ್ ಹೇಳಿದ್ದಾರೆ.

ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಯಲ್ಲಿ ತಾನು ಆಡುವ ಪಂದ್ಯಗಳನ್ನು ಭಾರತ ಯುಎಇನಲ್ಲಿ ಆಡಲಿದೆ. ಪಾಕಿಸ್ತಾನಕ್ಕೆ ಹೋಗಲು ಭಾರತ ಸರ್ಕಾರದ ಅನುಮತಿಯಿಲ್ಲದ ಕಾರಣ ಬಿಸಿಸಿಐ ಟೀಂ ಇಂಡಿಯಾವನ್ನು ಪಾಕ್ ಗೆ ಕಳುಹಿಸಲು ಒಪ್ಪಿರಲಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments