Webdunia - Bharat's app for daily news and videos

Install App

ಹೊಸ ವರ್ಷದ ಮರುದಿನವೇ ಬಿಸಿಸಿಐಗೆ ಕಾದಿದೆ ಶಾಕ್!

Webdunia
ಭಾನುವಾರ, 1 ಜನವರಿ 2017 (07:46 IST)
ನವದೆಹಲಿ: ಹೊಸ ವರ್ಷದ ಮರುದಿನವೇ ಹೊಸ ಶಾಕ್ ಎದುರಿಸಲು ಬಿಸಿಸಿಐ ಸಜ್ಜಾಗಬೇಕಿದೆ. ನಾಳೆ ಬಿಸಿಸಿಐ ಅಧ್ಯಕ್ಷ ಅನುರಾಗ್ ಠಾಕೂರ್ ಮೇಲೆ ಹೊರಿಸಿದ ಆರೋಪದ ಮೇಲೆ ಸುಪ್ರೀಂ ಕೋರ್ಟ್ ತೀರ್ಪು ನೀಡಲಿದೆ.


ಲೋಧಾ ಸಮಿತಿಯ ಒಂದು ಪ್ರಸ್ತಾವನೆಗೆ ಸರ್ಕಾರ ಮಧ್ಯಪ್ರವೇಶಿಸಬೇಕೆಂದು ಐಸಿಸಿ ಕೇಳಿದೆ ಎಂದು ಸುಳ್ಳು ಪ್ರಮಾಣ ಪತ್ರ ನೀಡಿದ ಹಿನ್ನಲೆಯಲ್ಲಿ ಠಾಕೂರ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಅದರ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್  ಬಿಸಿಸಿಐ ಅಧ್ಯಕ್ಷರ ಹಣೆಬರಹ ಬರೆಯಲಿದೆ. ಆರೋಪ ಸಾಬೀತಾದಲ್ಲಿ ಜೈಲಿಗೆ ಹೋಗಲು ತಯಾರಾಗಿ ಎಂದು ನ್ಯಾಯಾಲಯ ಈ ಮೊದಲೇ ಎಚ್ಚರಿಸಿತ್ತು.

ಅಲ್ಲದೆ ಲೋಧಾ ಸಮಿತಿ ವರದಿ ಜಾರಿಗೆ ತರದಿದ್ದರೆ, ಬಿಸಿಸಿಐನ ಉನ್ನತ ಅಧಿಕಾರಿಗಳನ್ನು ಅಮಾನತುಗೊಳಿಸಿ ವರದಿ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಈ ಮೊದಲು ಹೇಳಿತ್ತು. ಒಂದು ವೇಳೆ ನ್ಯಾಯಾಲಯ ಹೀಗೆ ಮಾಡಿದರೆ, ಅಧ್ಯಕ್ಷ ಅನುರಾಗ್ ಠಾಕೂರ್ ಸೇರಿದಂತೆ ಬಿಸಿಸಿಐನ ಉನ್ನತ ಅಧಿಕಾರಿಗಳ ಸ್ಥಾನಕ್ಕೆ ಬೇರೆ ಅಧಿಕಾರಿಗಳನ್ನು ನೇಮಿಸಬಹುದು.

ಈ ಎಲ್ಲಾ ಹಿನ್ನಲೆಯಲ್ಲಿ ಬಿಸಿಸಿಗೆ ಸೋಮವಾರ ನಿರ್ಣಾಯಕ ದಿನವಾಗಲಿದೆ. ಇದೇ ವೇಳೆ ಭಾರತದವರೇ ಆದ ಐಸಿಸಿ ಅಧ್ಯಕ್ಷ ಶಶಾಂಕ್ ಮನೋಹರ್ ಬಿಸಿಸಿಐಗೆ ಪತ್ರ ಬರೆದಿರುವುದಾಗಿ ಲೋಧಾ ಸಮಿತಿಗೆ ಹೇಳಿರುವುದರಿಂದ ಬಿಸಿಸಿಐ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳಲೂ ಸಾಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

ಮುಂದಿನ ಸುದ್ದಿ
Show comments