Webdunia - Bharat's app for daily news and videos

Install App

ಗಾಯಗೊಂಡಿರುವ ಶ್ರೇಯಸ್ ಅಯ್ಯರ್ ಮತ್ತೊಂದು ವಿವಾದ

Krishnaveni K
ಸೋಮವಾರ, 18 ಮಾರ್ಚ್ 2024 (12:39 IST)
ಕೋಲ್ಕೊತ್ತಾ: ಬೆನ್ನು ನೋವಿಗೊಳಗಾಗಿದ್ದಾರೆ ಎನ್ನಲಾದ ಶ್ರೇಯಸ್ ಅಯ್ಯರ್ ಇದೀಗ ಐಪಿಎಲ್ ತಂಡ ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡವನ್ನು ಕೂಡಿಕೊಂಡಿದ್ದು ಮತ್ತೆ ವಿವಾದಕ್ಕೆ ಕಾರಣವಾಗಿದೆ.

ರಣಜಿ ಟ್ರೋಫಿ ಫೈನಲ್ ಪಂದ್ಯದ ವೇಳೆ ಶ್ರೇಯಸ್ ಅಯ್ಯರ್ ಬೆನ್ನು ನೋವಿನಿಂದಾಗಿ ಕೊನೆಯ ಎರಡು ದಿನ ಫೀಲ್ಡಿಂಗ್ ಮಾಡಲು ಮೈದಾನಕ್ಕಿಳಿದಿರಲಿಲ್ಲ. ಅದಾದ ಬಳಿಕ ಅವರು ಐಪಿಎಲ್ ನ ಆರಂಭಿಕ ಪಂದ್ಯಗಳಿಗೆ ಅಲಭ್ಯರಾಗಲಿದ್ದಾರೆ ಎಂಬ ವದಂತಿಯಿತ್ತು. ಆದರೆ ಕೆಕೆಆರ್ ತಂಡ ಬಳಿಕ ಅವರು ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ಸ್ಪಷ್ಟನೆ ನೀಡಿತ್ತು.

ಆದರೆ ಇದೀಗ ಶ್ರೇಯಸ್ ಅಯ್ಯರ್ ಎಲ್ಲಾ ಆಟಗಾರರಂತೆ ಕೆಕೆಆರ್ ತಂಡವನ್ನು ಕೂಡಿಕೊಂಡಿದ್ದು, ಅವರ ಗಾಯದ ಬಗ್ಗೆ ಮತ್ತೆ ಪ್ರಶ್ನೆ ಮೂಡಿದೆ. ನಿಜವಾಗಿಯೂ ಗಾಯವಾಗಿದ್ದರೆ ಈಗಲೇ ಐಪಿಎಲ್ ನ ಆರಂಭಿಕ ಪಂದ್ಯಗಲ್ಲಿ ಹೇಗೆ ಆಡಲಿದ್ದಾರೆ ಎಂದು ಪ್ರಶ್ನೆ ಮೂಡಿದೆ.

ಈ ಮೊದಲು ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ವೇಳೆ ಬೆನ್ನು ನೋವಿಗೊಳಗಾಗಿದ್ದ ಶ್ರೇಯಸ್ ಅಯ್ಯರ್ ರಣಜಿ ಆಡಬೇಕೆಂದು ಬಿಸಿಸಿಐ ಸೂಚಿಸಿದ್ದಾಗ ಬೆನ್ನು ನೋವಿನ ನೆಪ ಹೇಳಿದ್ದರು. ಆದರೆ ಬಳಿಕ ಎನ್ ಸಿಎ ಅಧಿಕಾರಿಗಳು ಅವರು ಫಿಟ್ ಎಂದು ಘೋಷಿಸಿದ್ದರು. ಇದು ವಿವಾದಕ್ಕೆ ಕಾರಣವಾಗಿತ್ತು. ಕೊನೆಗೆ ಶ್ರೇಯಸ್ ರಣಜಿ ಫೈನಲ್ ಆಡಿದ್ದರು. ಆದರೆ ಕೇವಲ ಬ್ಯಾಟಿಂಗ್ ಮಾತ್ರ ಮಾಡಿ ಮತ್ತೆ ಬೆನ್ನು ನೋವಿನ ನೆಪ ಹೇಳಿದ್ದರು. ಆದರೆ ಈಗ ಐಪಿಎಲ್ ತಂಡ ಸೇರಿಕೊಂಡಿರುವುದು ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments