Select Your Language

Notifications

webdunia
webdunia
webdunia
webdunia

ಭಾರತ-ಇಂಗ್ಲೆಂಡ್ ಸರಣಿಯಿಂದ ಹೊರಬಿದ್ದ ಶ್ರೇಯಸ್ ಐಯರ್

ಭಾರತ-ಇಂಗ್ಲೆಂಡ್ ಸರಣಿಯಿಂದ ಹೊರಬಿದ್ದ ಶ್ರೇಯಸ್ ಐಯರ್
ಪುಣೆ , ಗುರುವಾರ, 25 ಮಾರ್ಚ್ 2021 (09:02 IST)
ಪುಣೆ: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಉಳಿದ ಎರಡು ಏಕದಿನ ಪಂದ್ಯಗಳಿಂದ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಶ್ರೇಯಸ್ ಐಯರ್ ಹೊರಬಿದ್ದಿದ್ದಾರೆ.


ಮೊದಲ ಏಕದಿನ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಭುಜಕ್ಕೆ ಗಾಯ ಮಾಡಿಕೊಂಡಿದ್ದ ಶ್ರೇಯಸ್ ಸರಣಿಯ ಉಳಿದ ಪಂದ್ಯಗಳನ್ನು ಆಡಲು ಅನ್ ಫಿಟ್ ಆಗಿದ್ದಾರೆ. ಹೀಗಾಗಿ ಸರಣಿಯಿಂದ ಹೊರಗುಳಿಯಲಿದ್ದಾರೆ.

ಐಯರ್ ಬದಲಿಗೆ ಮುಂದಿನ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್ ಅಥವಾ ರಿಷಬ್ ಪಂತ್ ತಂಡದ ಆಡುವ ಬಳಗಕ್ಕೆ ಆಯ್ಕೆಯಾಗಬಹುದು. ಒಂದು ರಿಷಬ್ ಆಡುವ ಬಳಗಕ್ಕೆ ಬಂದರೆ ಕೆಎಲ್ ರಾಹುಲ್ ಮೇಲಿನ ಹೆಚ್ಚುವರಿ ವಿಕೆಟ್ ಕೀಪಿಂಗ್ ಹೊರೆ ಕಡಿಮೆಯಾಗಲಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ತಂಡಕ್ಕೆ ಆಯ್ಕೆಯಾಗದೇ ಇದ್ದಾಗ ಶಿಖರ್ ಧವನ್ ಏನು ಮಾಡ್ತಾರೆ ಗೊತ್ತಾ?!