ಶ್ರೇಯಸ್ ಅಯ್ಯರ್ ಆರೋಗ್ಯ ಸ್ಥಿತಿ ಗಂಭೀರ: ಐಸಿಯುವಿನಲ್ಲಿ ಚಿಕಿತ್ಸೆ

Krishnaveni K
ಸೋಮವಾರ, 27 ಅಕ್ಟೋಬರ್ 2025 (12:10 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯದ ವೇಳೆ ಗಾಯಗೊಂಡಿದ್ದ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಸ್ಥಿತಿ ಗಂಭೀರವಾಗಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರಿದಿದೆ.

ಮೂರನೇ ಏಕದಿನ ಪಂದ್ಯದ ವೇಳೆ ಅಲೆಕ್ಸ್ ಕ್ಯಾರಿ ನೀಡಿದ ಕಷ್ಟಕರ ಕ್ಯಾಚ್ ಪಡೆಯುವ ಯತ್ನದಲ್ಲಿ ಶ್ರೇಯಸ್ ಅಯ್ಯರ್ ಅನಾಮತ್ತಾಗಿ ನೆಲಕ್ಕೆ ಬಿದ್ದಿದ್ದರು. ಈ ವೇಳೆ ಅವರ  ಪಕ್ಕೆಲುಬಿನ ಭಾಗಕ್ಕೆ ಬಲವಾಗಿ ಹೊಡೆತ ಬಿದ್ದಿತ್ತು. ನೋವಿನಿಂದ ನೆಲಕ್ಕುರುಳಿದ ಶ್ರೇಯಸ್ ಅಯ್ಯರ್ ರನ್ನು ಬಳಿಕ ಫಿಸಿಯೋ ಬಂದು ಹೊರಗೆ ಕರೆದೊಯ್ದಿದ್ದರು.

ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇದೀಗ ಅವರ ಗಾಯದ ಆಳವೆಷ್ಟೆಂದು ತಿಳಿದುಬಂದಿದೆ. ಮೂಲಗಳ ಪ್ರಕಾರ ಶ್ರೇಯಸ್ ಗೆ ಪಕ್ಕೆಲುಬಿಗೆ ಬಲವಾದ ಪೆಟ್ಟು ಬಿದ್ದು ಆಂತರಿಕ ರಕ್ತಸ್ರಾವವಾಗಿದೆ. ಹೀಗಾಗಿ ಸದ್ಯಕ್ಕೆ ಅವರಿಗೆ ಸಿಡ್ನಿಯ ಆಸ್ಪತ್ರೆಯಲ್ಲಿ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ರಕ್ತಸ್ರಾವದಿಂದ ದೇಹಕ್ಕೆ ಸೋಂಕು ತಗುಲದಂತೆ ಎಚ್ಚರಿಕೆ ವಹಿಸಬೇಕಾಗಿದೆ. ಹೀಗಾಗಿ ಇನ್ನೂ ಒಂದು ವಾರ ಕಾಲ ಅವರನ್ನು ಆಸ್ಪತ್ರೆಯಲ್ಲಿರಿಸಿ ತೀವ್ರ ನಿಗಾ ವಹಿಸಲಾಗುತ್ತದೆ ಎಂದು ತಿಳಿದುಬಂದಿದೆ. ಸದ್ಯಕ್ಕಂತೂ ಅವರು ಮತ್ತೆ ಕ್ರಿಕೆಟ್ ಆಡುವ ಪರಿಸ್ಥಿತಿಯಲ್ಲಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments