Webdunia - Bharat's app for daily news and videos

Install App

ಬೌದ್ಧ ಸನ್ಯಾಸಿಗಳ ಜೊತೆ ಕಾಲಕಳೆದ ಶುಬ್ಮನ್ ಗಿಲ್: ಎಲ್ಲಾ ಕೊಹ್ಲಿ ಮಹಿಮೆ ಎಂದ ಫ್ಯಾನ್ಸ್

Krishnaveni K
ಮಂಗಳವಾರ, 5 ಮಾರ್ಚ್ 2024 (15:05 IST)
Photo Courtesy: Twitter
ಧರ್ಮಶಾಲಾ: ಇಂಗ್ಲೆಂಡ್ ವಿರುದ್ಧ ಐದನೇ ಟೆಸ್ಟ್ ಪಂದ್ಯವಾಡಲು ಧರ್ಮಶಾಲಾದಲ್ಲಿರುವ ಟೀಂ ಇಂಡಿಯಾ ಕ್ರಿಕೆಟಿಗ ಶುಬ್ಮನ್ ಗಿಲ್ ತಮ್ಮ ಬಿಡುವಿನ ವೇಳೆಯಲ್ಲಿ ಬೌದ್ಧ ಸನ್ಯಾಸಿಗಳ ಜೊತೆ ಕಾಲ ಕಳೆದಿದ್ದಾರೆ. ಇದಕ್ಕೆ ನೆಟ್ಟಿಗರು ಎಲ್ಲಾ ಕೊಹ್ಲಿಯ ಮಹಿಮೆ ಎಂದು ಕಾಲೆಳೆದಿದ್ದಾರೆ.

ಮಾರ್ಚ್ 7 ರಿಂದ ಭಾರತ ಮತ್ತು ಇಂಗ್ಲೆಂಡ್ ನಡುವೆ ಧರ್ಮಶಾಲಾ ಮೈದಾನದಲ್ಲಿ ಐದನೇ ಟೆಸ್ಟ್ ಪಂದ್ಯ ನಡೆಯಲಿದೆ. ಇದಕ್ಕೆ ಈಗಾಗಲೇ ಟೀಂ ಇಂಡಿಯಾ ಇಲ್ಲಿಗೆ ಬಂದಿಳಿದಿದೆ. ಕಳೆದ ಮೂರು ಪಂದ್ಯಗಳನ್ನು ಸತತವಾಗಿ ಗೆದ್ದಿರುವ ಟೀಂ ಇಂಡಿಯಾ ಸರಣಿ ತನ್ನದಾಗಿಸಿಕೊಂಡಿದೆ. ಈ ಎಲ್ಲಾ ಪಂದ್ಯಗಳಲ್ಲಿ ಶುಬ್ಮನ್ ಗಿಲ್ ಮಹತ್ವದ ಇನಿಂಗ್ಸ್ ಆಡಿದ್ದರು.

ಇದೀಗ ಗಿಲ್ ಐದನೇ ಟೆಸ್ಟ್ ಪಂದ್ಯಕ್ಕೆ ಸಜ್ಜಾಗುತ್ತಿದ್ದಾರೆ. ಇದರ ನಡುವೆ ಧರ್ಮಶಾಲಾದಲ್ಲಿ ಬೌದ್ಧ ಸನ್ಯಾಸಿಗಳೊಂದಿಗೆ ಕಾಲ ಕಳೆಯುತ್ತಿರುವ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದಾರೆ. ಗಿಲ್ ಅವರ ಧಾರ್ಮಿಕ ಶ್ರದ್ಧೆಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಜೊತೆಗೆ ಭಾರತ ಈ ಯಂಗ್ ಸ್ಟಾರ್ ಕ್ರಿಕೆಟಿಗನ ಧಾರ್ಮಿಕ ಶ್ರದ್ಧೆಗೆ ಕೊಹ್ಲಿಯೇ ಪ್ರೇರಣೆ ಎಂದು ನೆಟ್ಟಿಗರು ಕೊಂಡಾಡಿದ್ದಾರೆ.

ವಿರಾಟ್ ಕೊಹ್ಲಿ ತಮಗೆ ಬಿಡುವು ಸಿಕ್ಕಾಗಲೆಲ್ಲಾ ಸ್ವಾಮೀಜಿಗಳು, ದೇವಾಲಯ ಎಂದು ಧಾರ್ಮಿಕ ಶ್ರದ್ಧೆ ಪ್ರಕಟಿಸುತ್ತಿರುತ್ತಾರೆ. ಇದೀಗ ಅವರದೇ ಹಾದಿಯಲ್ಲಿ ಇತರೆ ಕ್ರಿಕೆಟಿಗರು ನಡೆಯುತ್ತಿದ್ದಾರೆ. ಇವರಿಗೆಲ್ಲಾ ಕೊಹ್ಲಿಯೇ ಮಾದರಿ ಎಂದು ನೆಟ್ಟಿಗರು ಕೊಂಡಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments