Webdunia - Bharat's app for daily news and videos

Install App

ಡಬ್ಲ್ಲುಪಿಎಲ್: ಕನ್ನಡದಲ್ಲೇ ಬರೆದು ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ ಸ್ಮೃತಿ ಮಂಧಾನ

Krishnaveni K
ಸೋಮವಾರ, 18 ಮಾರ್ಚ್ 2024 (20:35 IST)
ದೆಹಲಿ: ಡಬ್ಲ್ಲುಪಿಎಲ್ ಫೈನಲ್ ಗೆದ್ದು ಇತಿಹಾಸ ನಿರ್ಮಿಸಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಈಗ ಮೊದಲ ಗೆಲುವಿನ ಖುಷಿಯಲ್ಲಿದೆ. ನಾಯಕಿ ಸ್ಮೃತಿ ಮಂಧಾನ ನಿನ್ನೆಯೇ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದ್ದರು.

ಗೆಲುವಿನ ಸಂಭ್ರಮದಲ್ಲಿ ಮಾತನಾಡಿದ್ದ ಸ್ಮೃತಿ ಮಂಧಾನ ಆರ್ ಸಿಬಿಯ ವಿಧೇಯ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಸಲ್ಲಿಸಿದ್ದರು. ಕೊನೆಯಲ್ಲಿ ಕನ್ನಡದಲ್ಲೇ ಈ ಸಲ ಕಪ್ ನಮ್ದೇ ಅಲ್ಲ ಈ ಸಲ ಕಪ್ ನಮ್ದು ಎನ್ನುವ ಮೂಲಕ ಕನ್ನಡಿಗರಿಗೆ ಧನ್ಯವಾದ ಸಲ್ಲಿಸಿದ್ದರು.

ಇದು ಇಷ್ಟಕ್ಕೇ ನಿಂತಿಲ್ಲ. ಸ್ಮೃತಿ ತಮ್ಮ ಸೋಷಿಯಲ್ ಮೀಡಿಯಾದಲ್ಲೂ ಕನ್ನಡಾಭಿಮಾನ ಮೆರೆದಿದ್ದಾರೆ. ಇನ್ ಸ್ಟಾಗ್ರಾಂ ಪುಟದಲ್ಲೂ ಕನ್ನಡದಲ್ಲೇ ಈ ಸಲ ಕಪ್ ನಮ್ದು ಎಂದು ಬರೆದು ಧನ್ಯವಾದ ಸಲ್ಲಿಸಿದ್ದಾರೆ. ಸ್ಮೃತಿ ಕನ್ನಡದಲ್ಲೇ ಬರೆದಿರುವುದು ಅಭಿಮಾನಿಗಳಿಗೆ ತುಂಬಾ ಖುಷಿ ನೀಡಿದೆ.

ನೀವು ನಮ್ಮ ಮನಸ್ಸು ಗೆದ್ದುಬಿಟ್ರಿ ಎಂದು ಅಭಿಮಾನಿಗಳು ಧನ್ಯವಾದ ಸಲ್ಲಿಸಿದ್ದಾರೆ. ಜೊತೆಗೆ ನೀವು ಸೂಪರ್, ಇನ್ಮೇಲೆ ಪುರುಷರ ಸರದಿ. ಅವರೂ ಈ ಸಲ ಕಪ್ ನಮ್ಮದೇ ಮಾಡಲಿ ಎಂದು ಶುಭ ಹಾರೈಸಿದ್ದಾರೆ. ಬಹುತೇಕರು ಕ್ವೀನ್ ಸ್ಮೃತಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments