Webdunia - Bharat's app for daily news and videos

Install App

ಆರ್ ಸಿಬಿ ಫ್ಯಾನ್ಸ್ ಎಷ್ಟು ಹೊಗಳ್ತಾರೋ, ಅಷ್ಟೇ ಬೈತಾರೆ: ಸ್ಮೃತಿ ಮಂಧನ

Krishnaveni K
ಶುಕ್ರವಾರ, 14 ಫೆಬ್ರವರಿ 2025 (14:10 IST)
ವಡೋದರಾ: ಡಬ್ಲ್ಯುಪಿಎಲ್ ಟೂರ್ನಿ ಇಂದಿನಿಂದ ಆರಂಭವಾಗುತ್ತಿದ್ದು ಮೊದಲ ಪಂದ್ಯದಲ್ಲೇ ಹಾಲಿ ಚಾಂಪಿಯನ್ ಆರ್ ಸಿಬಿ ಮತ್ತು ಗುಜರಾತ್ ಜೈಂಟ್ಸ್ ಮುಖಾ ಮುಖಿಯಾಗಲಿದೆ. ಈ ಪಂದ್ಯಕ್ಕೆ ಮುನ್ನ ಆರ್ ಸಿಬಿ ಫ್ಯಾನ್ಸ್ ಬಗ್ಗೆ ಸ್ಮೃತಿ ಮಂಧನ ಮಾತನಾಡಿದ್ದಾರೆ.

ಡಬ್ಲ್ಯುಪಿಎಲ್ 3 ನೇ ಆವೃತ್ತಿ ಆರಂಭಕ್ಕೆ ಮುನ್ನ ಸ್ಮೃತಿ ಮಂಧನ ಸಂದರ್ಶನದಲ್ಲಿ ಭಾಗಿಯಾಗಿದ್ದು, ಆರ್ ಸಿಬಿ ಅಭಿಮಾನಿಗಳ ಬೆಂಬಲ, ಟೀಕೆಗಳ ಮುಕ್ತವಾಗಿ ಮಾತನಾಡಿದ್ದಾರೆ. ಆರ್ ಸಿಬಿ ಅಭಿಮಾನಿಗಳು ನಮ್ಮನ್ನು ಎಷ್ಟು ಬೆಂಬಲಿಸುತ್ತಾರೋ ತಪ್ಪು ಮಾಡಿದಾಗ ಅಷ್ಟೇ ಟೀಕೆ ಮಾಡುತ್ತಾರೆ ಎಂದಿದ್ದಾರೆ.

‘ಬಹುಶಃ ಆರ್ ಸಿಬಿಗೆ ಇರುವಷ್ಟು ಫ್ಯಾನ್ ಕ್ರೇಜ್ ಯಾವ ತಂಡಕ್ಕೂ ಇಲ್ಲ. ಜಗತ್ತಿನ ಯಾವುದೇ ಮೂಲೆಗೆ ಹೋದರೂ ಆರ್ ಸಿಬಿ ಎಂದು ಕೂಗಿ ಬೆಂಬಲಿಸುವುದನ್ನು ಕೇಳಲು ಯಾರು ಬಯಸುವುದಿಲ್ಲ ಹೇಳಿ? ಈ ಅಭಿಮಾನಿಗಳ ಬೆಂಬಲದಿಂದಲೇ ನಾವು ಚೆನ್ನಾಗಿ ಆಡಲು ಉತ್ಸಾಹ ಹೆಚ್ಚುತ್ತದೆ’ ಎಂದಿದ್ದಾರೆ.

‘ನಮ್ಮ ಸುತ್ತ ಏನಾಗುತ್ತಿದೆ ಎಂಬ ಬಗ್ಗೆ ನಾವು ಹೆಚ್ಚು ಯೋಚಿಸಲ್ಲ. ಒಂದು ತಂಡವಾಗಿ ಉತ್ತಮ ಕ್ರಿಕೆಟ್ ಆಡುವುದಷ್ಟೇ ನಮ್ಮ ಆದ್ಯತೆಯಾಗಿರುತ್ತದೆ. ಯಾಕೆಂದರೆ ಆರ್ ಸಿಬಿ ಫ್ಯಾನ್ಸ್ ಹೇಗೆಂದರೆ ಎಷ್ಟು ಚೆನ್ನಾಗಿ ಬೆಂಬಲಿಸುತ್ತಾರೋ ತಪ್ಪು ಮಾಡಿದಾಗ ಅಷ್ಟೇ ಟೀಕೆ ಮಾಡ್ತಾರೆ. ಬೇರೆ ತಂಡಗಳಿಗೆ ಹೋಲಿಸಿದರೆ ನಮ್ಮ ಅಭಿಮಾನಿಗಳು ಟೀಕೆಯನ್ನೂ ಹೆಚ್ಚು ಮಾಡ್ತಾರೆ. ಹೀಗಾಗಿ ಒಂದು ತಂಡವಾಗಿ ಉತ್ತಮ ಆಟ ಆಡುವುದು ನಮ್ಮ ಗುರಿಯಾಗಿರುತ್ತದೆ’ ಎಂದು ಸ್ಮೃತಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

ಮುಂದಿನ ಸುದ್ದಿ
Show comments