Webdunia - Bharat's app for daily news and videos

Install App

ರೆಹಾನೆ, ಕೆಎಲ್ ರಾಹುಲ್ ನಡೆಸಿಕೊಂಡ ರೀತಿಗೆ ವಿರಾಟ್ ಕೊಹ್ಲಿಗೆ ಪರೋಕ್ಷ ಎಚ್ಚರಿಕೆ ಕೊಟ್ಟ ಗಂಗೂಲಿ!

Webdunia
ಗುರುವಾರ, 19 ಜುಲೈ 2018 (09:25 IST)
ಲೀಡ್ಸ್: ಟೀಂ ಇಂಡಿಯಾದಲ್ಲಿ ಪ್ರತಿಭೆಯಿದ್ದೂ ಅವಕಾಶ ಸಿಗದ ಆಟಗಾರರೆಂದರೆ ಅಜಿಂಕ್ಯಾ ರೆಹಾನೆ ಮತ್ತು ಕೆಎಲ್ ರಾಹುಲ್. ಯಾವುದೋ ಕಾರಣಕ್ಕೆ ಇವರಿಬ್ಬರನ್ನು ಕೈ ಬಿಡುತ್ತಿರುವುದಕ್ಕೆ ಮಾಜಿ ನಾಯಕ ಸೌರವ್ ಗಂಗೂಲಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
 

ಇಂಗ್ಲೆಂಡ್ ವಿರುದ್ಧ ಕಿರು ಮಾದರಿ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಕೆಎಲ್ ರಾಹುಲ್ ರನ್ನು ನಿರ್ಣಾಯಕ ಪಂದ್ಯದಿಂದ ಹೊರಗಿಟ್ಟ ಮೇಲೆ ಅವರನ್ನು ಹೊರಗಿಡುವುದರ ಬಗ್ಗೆ ಆಗುತ್ತಿದ್ದ ಚರ್ಚೆಗೆ ಮತ್ತಷ್ಟು ಪುಕ್ಕ ಸಿಕ್ಕಿದೆ.

ರಾಹುಲ್ ರಂತೆಯೇ ಕಿರು ಮಾದರಿಯಲ್ಲಿ ಕಡೆಗಣಿಸಲ್ಪಡುತ್ತಿರುವ ಆಟಗಾರನೆಂದರೆ ಅಜಿಂಕ್ಯಾ ರೆಹಾನೆ. ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಭಾರತ ತಂಡವನ್ನು ಮುನ್ನಡೆಸುವ ಪ್ರತಿಭಾವಂತ ಆಟಗಾರನಿಗೆ ಹೆಚ್ಚಾಗಿ ತ್ಯಾಗ ರಾಜ ಪಟ್ಟ ಸಿಗುವುದೇ ಹೆಚ್ಚು.

ಹೀಗಾಗಿ ಈ ಆಟಗಾರರನ್ನು ಕೊಹ್ಲಿ ಸರಿಯಾಗಿ ನೋಡಿಕೊಳ್ಳಬೇಕು, ಬಳಸಿಕೊಳ್ಳಬೇಕು ಎಂದು ಮಾಜಿ ನಾಯಕ ಗಂಗೂಲಿ ಸಲಹೆ ನೀಡಿದ್ದಾರೆ. ಭಾರತ ತಂಡ ಈಗ ಟಾಪ್ ಆರ್ಡರ್ ಬ್ಯಾಟ್ಸ್ ಮನ್ ಗಳ ಮೇಲೆ ಹೆಚ್ಚು ಅವಲಂಬಿತವಾಗಿದೆ. ಅಗ್ರ ಕ್ರಮಾಂಕದ ಆಟಗಾರರು ರನ್ ಗಳಿಸಲು ವಿಫಲರಾದರೆ ತಂಡ ಸೊರಗುತ್ತದೆ. ಇದು ಈಗ ಗಂಭೀರ ಸಮಸ್ಯೆಯಾಗಿ ಬೆಳೆಯುತ್ತಿದ್ದು, ಟೀಂ ಇಂಡಿಯಾ ಇದರ ಬಗ್ಗೆ ಗಮನ ಹರಿಸಲೇಬೇಕು ಎಂದು ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ.

‘ನಾನಾಗಿದ್ದರೆ ಕಣ್ಣು ಮುಚ್ಚಿ ರಾಹುಲ್ ಗೆ ನಾಲ್ಕನೇ ಕ್ರಮಾಂಕ ಕೊಟ್ಟು ಬಿಡುತ್ತಿದ್ದೆ. ಒಂದು ಪಂದ್ಯದಲ್ಲಿ ಆಡಲಿಲ್ಲವೆಂದು ಉತ್ತಮ ಫಾರ್ಮ್ ನಲ್ಲಿರುವ ಆಟಗಾರನನ್ನು ಕೈ ಬಿಡುವುದು ತಪ್ಪು. ಸೀದಾ ರಾಹುಲ್ ಬಳಿ ಹೋಗಿ ನಿನಗೆ 15 ಪಂದ್ಯ ಕೊಡುತ್ತೇವೆ ಎಂದು ಮಾತನಾಡಲಿ. ಆಮೇಲೆ ಆಗುತ್ತದೆಂದು ನೀವೇ ನೋಡಿ. ಅಂತಹ ಆಟಗಾರರನ್ನು ನೀವು ಆಗಾಗ ಸೃಷ್ಟಿ ಮಾಡಲು ಸಾಧ್ಯವಿಲ್ಲ. ಸಾಕಷ್ಟು ಅವಕಾಶ ಕೊಟ್ಟು ನೋಡಿ. ರೆಹಾನೆಗೂ ಇದೇ ರೀತಿ ಆಗುತ್ತಿದೆ’ ಎಂದು ಗಂಗೂಲಿ ಬೇಸರ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments