Webdunia - Bharat's app for daily news and videos

Install App

ವಿವಾದವಾಗುತ್ತಿದ್ದಂತೇ ಸಚಿನ್ ತೆಂಡುಲ್ಕರ್ ವಿರುದ್ಧ ಹೇಳಿಕೆ ಬಗ್ಗೆ ಸ್ಪಷ್ಟನೆ ನೀಡಿದ ಗಂಗೂಲಿ

Webdunia
ಮಂಗಳವಾರ, 26 ಫೆಬ್ರವರಿ 2019 (10:33 IST)
ಕೋಲ್ಕೊತ್ತಾ: ಪುಲ್ವಾಮಾ ದಾಳಿಯ ನಂತರವೂ ಭಾರತ ಪಾಕಿಸ್ತಾನ ವಿರುದ್ಧ ವಿಶ್ವಕಪ್ ನಲ್ಲಿ ಆಡಿ ಸೋಲಿಸಬೇಕು ಎಂದಿದ್ದ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಹೇಳಿಕೆಯನ್ನು ಟೀಕೆ ಮಾಡಲು ಹೋಗಿ ವಿವಾದವಾಗುತ್ತಿದ್ದಂತೆ ಮಾಜಿ ನಾಯಕ ಸೌರವ್ ಗಂಗೂಲಿ ಇದೀಗ ಸ್ಪಷ್ಟನೆ ನೀಡಿದ್ದಾರೆ.


ಪಾಕ್ ವಿರುದ್ಧ ಆಡದೇ ಅವರಿಗೆ ಎರಡು ಪಾಯಿಂಟ್ ಸುಮ್ಮನೇ ಬಿಟ್ಟುಕೊಟ್ಟು ಪಂದ್ಯ ಕಳೆದುಕೊಳ್ಳುವುದು ನನಗಿಷ್ಟವಿಲ್ಲ. ಬದಲಾಗಿ ಅವರನ್ನು ಆಡಿ ಸೋಲಿಸಬೇಕು ಎಂದು ಸಚಿನ್ ಹೇಳಿದ್ದರು. ಇದಕ್ಕೆ ಖಾಸಗಿ ವಾಹಿನಿಯೊಂದರಲ್ಲಿ ಪ್ರತಿಕ್ರಿಯಿಸಿದ್ದ ಗಂಗೂಲಿ ಸಚಿನ್ ಗೆ ಎರಡು ಅಂಕ ಮಾತ್ರ ಬೇಕು, ನನಗೆ ವಿಶ್ವಕಪ್ ಬೇಕು ಎಂದಿದ್ದರು. ಈ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.

ಇದೀಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಗಂಗೂಲಿ ‘ಸಚಿನ್ ಮತ್ತು ನನ್ನ ನಡುವೆ ಯಾವುದೇ ವಿರೋಧವಿಲ್ಲ. ಆತ ನನಗೆ 25 ವರ್ಷಗಳಿಂದ ಸ್ನೇಹಿತ. ಅವರ ವಿರುದ್ಧವಾಗಿ ನಾನು ಹೇಳಿಕೆ ಕೊಟ್ಟಿಲ್ಲ’ ಎಂದಿದ್ದಾರೆ. ಇದೀಗ ಗಂಗೂಲಿ ಸ್ಪಷ್ಟೀಕರಣದ ಬಗ್ಗೆ ಹೇಳಿಕೆ ನೀಡಿರುವ ಸಚಿನ್, ಗಂಗೂಲಿ ಹೀಗೆ ಸ್ಪಷ್ಟನೆ ಕೊಡಬೇಕಾದ ಅಗತ್ಯವಿಲ್ಲ. ನಾವೆಲ್ಲರೂ ದೇಶದ ಹಿತವನ್ನೇ ಬಯಸುತ್ತೇವೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments