Webdunia - Bharat's app for daily news and videos

Install App

ಮೀ ಟೂ ವಿವಾದದ ಬಗ್ಗೆ ಸೌರವ್ ಗಂಗೂಲಿ ಬಿಸಿಸಿಐಗೆ ರವಾನಿಸಿರುವ ಈಮೇಲ್ ನಲ್ಲಿ ಏನಿದೆ ಗೊತ್ತಾ?!

Webdunia
ಬುಧವಾರ, 31 ಅಕ್ಟೋಬರ್ 2018 (10:02 IST)
ಕೋಲ್ಕೊತ್ತಾ: ಬೆಂಗಾಳ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷರೂ ಆಗಿರುವ ಮಾಜಿ ನಾಯಕ ಸೌರವ್ ಗಂಗೂಲಿ ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ಮೇಲೆ ಬಂದಿರುವ ಮೀ ಟೂ ಆರೋಪದ ಬಗ್ಗೆ ಬಿಸಿಸಿಐಗೆ ಈಮೇಲ್ ರವಾನಿಸಿದ್ದಾರೆ.

ಗಂಗೂಲಿ ತಮ್ಮ ಈಮೇಲ್ ನಲ್ಲಿ ಪ್ರಕರಣದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರಲ್ಲದೆ, ಬಿಸಿಸಿಐನಲ್ಲಿ ಸದ್ಯಕ್ಕಿರುವ ನಾಯಕತ್ವದ ಗೊಂದಲದ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.

ಇದು ಸತ್ಯವೋ, ಸುಳ್ಳೋ ಎಂದು ನನಗೆ ಗೊತ್ತಿಲ್ಲ. ಆದರೆ ಇತ್ತೀಚೆಗೆ ಸಿಇಒ ರಾಹುಲ್ ಜೋಹ್ರಿ ಮೇಲೆ ಬಂದಿರುವ ಲೈಂಗಿಕ ಕಿರುಕುಳ ಆರೋಪ ನಿಜಕ್ಕೂ ಗಂಭೀರವಾದುದು, ಅಷ್ಟೇ ಅಲ್ಲ, ಭಾರತೀಯ ಕ್ರಿಕೆಟ್ ನನ್ನು ಆರಾಧಿಸುವ ಕೋಟ್ಯಂತರ ಪ್ರೇಮಿಗಳ ಭಾವನೆಗೆ ಧಕ್ಕೆ ತರುವಂತದ್ದು ಎಂದು ಗಂಗೂಲಿ ಬಿಸಿಸಿಐ ಕಾರ್ಯನಿರ್ವಾಹಕ ಅಧ್ಯಕ್ಷ ಸಿಕೆ ಖನ್ನಾ, ಕಾರ್ಯದರ್ಶಿ ಅಮಿತಾಬ್ ಚೌಧರಿ ಮತ್ತು ಖಜಾಂಜಿ ಅನಿರುದ್ಧ್ ಚೌಧರಿಗೆ ಈಮೇಲ್ ಮೂಲಕ ಪತ್ರ ಬರೆದಿದ್ದಾರೆ.

ಅಷ್ಟೇ ಅಲ್ಲದೆ, ಬಿಸಿಸಿಐನಲ್ಲಿ ಈಗ ನಾಯಕತ್ವದ್ದೇ ಸಮಸ್ಯೆ. ಬಿಸಿಸಿಐಗೆ ನಿಜವಾದ ಬಾಸ್ ಯಾರು ಎಂಬ ಗೊಂದಲವಿದೆ. ಹಲವು ವಿದೇಶೀ ಅಸೋಸಿಯೇಷನ್ ನ ಸ್ನೇಹಿತರು ನನ್ನ ಬಳಿ ಬಿಸಿಸಿಐನಲ್ಲಿ ಯಾರಿಗೆ ಅಧಿಕೃತ ಆಹ್ವಾನ ನೀಡಬೇಕು ಎಂದು ಕೇಳುತ್ತಿದ್ದಾರೆ. ಆದರೆ ನಾನು ಏನೆಂದು ಉತ್ತರಿಸಲಿ? ಇದು ಕಳವಳಕಾರಿ ಎಂದು ಗಂಗೂಲಿ ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಪ್ರಕಟ: ತಂಡದಲ್ಲಿದ್ದರೂ ಹಾರ್ದಿಕ್ ಪಾಂಡ್ಯಗೆ ಹಿಂಬಡ್ತಿ

Asia Cup: ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ವೇಳಾಪಟ್ಟಿ ಇಲ್ಲಿದೆ

ಮುಂದಿನ ಸುದ್ದಿ