Webdunia - Bharat's app for daily news and videos

Install App

ಭಾರತದ ವಿರುದ್ಧದ ಹೀನಾಯ ಸೋಲು: ಶ್ರೀಲಂಕಾ ಆಯ್ಕೆ ಸಮಿತಿ ರಾಜೀನಾಮೆ

Webdunia
ಮಂಗಳವಾರ, 29 ಆಗಸ್ಟ್ 2017 (20:11 IST)
ಭಾರತ ವಿರುದ್ಧದ ಟೆಸ್ಟ್ ಸರಣಿ ಮತ್ತು ಏಕದಿನ ಸರಣಿಗಳಲ್ಲಿ ಹೀನಾಯ ಸೋಲು ಕಂಡ ಬಳಿಕ ಸನತ್ ಜಯಸೂರ್ಯ ನೇತೃತ್ವದ ಶ್ರೀಲಂಕಾ ಕ್ರಿಕೆಟ್ ಆಯ್ಕೆ ಸಮಿತಿ ಸದಸ್ಯರು ರಾಜೀನಾಮೆ ನೀಡಿದ್ದಾರೆ.
 

ಟೆಸ್ಟ್ ಸರಣಿಯಲ್ಲಿ 0-3 ಅಂತರದಿಂದ ಸೋತು ಶ್ರೀಲಂಕಾ ತಂಡ ಮುಖಭಂಗ ಅನುಭವಿಸಿತು. 5 ಪಂದ್ಯಗಳ ಏಕದಿನ ಸರಣಿಯಲ್ಲೂ 3ರಲ್ಲಿ ಸೋತು ಸರಣಿ ಕೈಚೆಲ್ಲಿ ಕುಳಿತಿದೆ. ಹೀಗಾಗಿ, ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದೇ ಆಯ್ಕೆ ಸಮಿತಿ ಮುಂದಿನ ಎರಡು ಏಕದಿನ ಪಂದ್ಯಗಳು ಮತ್ತು ಏಕೈಕ ಟಿ-20 ಪಂದ್ಯಕ್ಕೂ ತಂಡವನ್ನ ಆಯ್ಕೆ ಮಾಡಿದೆ. ಸೆಪ್ಟೆಂಬರ್ 6ರಂದು ಅಧಿಕೃತವಾಗಿ ಹೊರ ಹೋಗಲಿದ್ದಾರೆ.

ಆಯ್ಕೆ ಸಮಿತಿ ಮುಖ್ಯಸ್ಥ ಸನತ್ ಜಯಸೂರ್ಯ, ಸದಸ್ಯರಾದ ರಂಜೀತ್ ಮಧುರಸಿಂಘೆ, ರೋಮೆಶ್ ಕಲುವಿತರನಾ, ಅಸಂಕ ಗುರುಸಿನ್ಹಾ, ಎರಿಕ್ ಉಪಾಶಾಂತಾ ರಾಜೀನಾಮೆ ಮುಂದಾಗಿರುವುದಾಗಿ ಕ್ರೀಡಾ ಸಚಿವಾಲಯ ತಿಳಿಸಿದೆ.

ಎರಡು ತಿಂಗಳ ಹಿಂದಷ್ಟೇ ಜಯಸೂರ್ಯ ನೇತೃತ್ವದ ಆಯ್ಕೆ ಸಮಿತಿಯ ಅಧಿಕಾರಾವಧಿಯನ್ನ 6 ತಿಂಗಳ ಕಾಲ ವಿಸ್ತರಿಸಲಾಗಿತ್ತು. ದಕ್ಷಿಣ ಆಫ್ರಿಕಾ ವಿರುದ್ಧದ ತವರಿನ ಸರಣಿ ಸೋಲು. ಬಾಂಗ್ಲಾ ವಿರುದ್ಧದ ಕಳಪೆ ಪ್ರದರ್ಶನದ ಜೊತೆಗೆ ಭಾರತ ವಿರುದ್ಧದ ಹೀನಾಯ ಸೋಲು ಆಯ್ಕೆ ಸಮಿತಿಯ ಬಲವಂತದ ರಾಜೀನಾಮೆಗೆ ಕಾರಣ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments