Webdunia - Bharat's app for daily news and videos

Install App

ಸಿಕ್ಸರ್ ಮೇಲೆ ಸಿಕ್ಸರ್ ಹೊಡೆದ ಲಂಕಾ ಬ್ಯಾಟ್ಸ್ ಮನ್ ಗೆ ಅಶ್ವಿನ್ ಕೊಟ್ಟ ಹೊಡೆತ ಹೇಗಿತ್ತು ಗೊತ್ತಾ?!

Webdunia
ಸೋಮವಾರ, 27 ನವೆಂಬರ್ 2017 (11:37 IST)
ನಾಗ್ಪುರ: ಟೀಂ ಇಂಡಿಯಾ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಸೋಲು ತಪ್ಪಿಸಿಕೊಳ್ಳಲು ಶ್ರೀಲಂಕಾ ತಿಣುಕಾಡುತ್ತಿದೆ. ದ್ವಿತೀಯ ಇನಿಂಗ್ಸ್ ನಲ್ಲಿ ನಾಲ್ಕನೇ ದಿನದ ಊಟದ ವಿರಾಮದ ವೇಳೆಗೆ ಲಂಕಾ 8 ವಿಕೆಟ್ ಕಳೆದುಕೊಂಡು 145 ರನ್ ಗಳಿಸಿ ಒದ್ದಾಡುತ್ತಿದೆ.
 

ನಾಯಕ ಚಂಡಿಮಾಲ್ 53 ರನ್ ಗಳಿಸಿ ಏಕಮಾತ್ರ ಭರವಸೆಯಾಗಿ ಉಳಿದಿದ್ದಾರೆ. ಹಾಗಿದ್ದರೂ ಇನ್ನೂ 260 ರನ್ ಹಿನ್ನಡೆ ಇರುವುದರಿಂದ ಸೋಲು ತಪ್ಪಿಸಿಕೊಳ್ಳುವುದು ತೀರಾ ಕಷ್ಟದ ಕೆಲಸವಾಗಿ ಉಳಿದಿದೆ.

ಭಾರತದ ಪರ ಮೊದಲು ಘಾತಕ ದಾಳಿ ಸಂಘಟಿಸಿದ ಇಶಾಂತ್ ಶರ್ಮಾ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್ ಪಡೆದರೆ 1 ವಿಕೆಟ್ ಉಮೇಶ್ ಯಾದವ್ ಪಾಲಾಗಿದೆ.

ಈ ನಡುವೆ ಮೊದಲ ಇನಿಂಗ್ಸ್ ನಲ್ಲಿ 4 ವಿಕೆಟ್ ಕಬಳಿಸಿದ್ದ ರವಿಚಂದ್ರನ್ ಅಶ್ವಿನ್ ಅವರ ಒಂದೇ ಓವರ್ ನಲ್ಲಿ ಲಂಕಾ ಬ್ಯಾಟ್ಸ್ ಮನ್ ಶನಕಾ ಎರಡು ಸಿಕ್ಸರ್ ಒಂದು ಬೌಂಡರಿ ಹೊಡೆದು ಗಾಯದ ಮೇಲೆ ಬರೆ ಎಳೆದರು. ಮತ್ತೆ ನಡೆದಿದ್ದು ಮ್ಯಾಜಿಕ್! ಮರು ಓವರ್ ನಲ್ಲೇ ಅಶ್ವಿನ್ ಶನಕಾ ವಿಕೆಟ್ ಕಿತ್ತು ಸೇಡು ತೀರಿಸಿಕೊಂಡರು.

ಅದಾದ ಬಳಿಕ ಒಂದಾದ ಮೇಲೆ ಒಂದರಂತೆ ಎರಡು ಓವರ್ ಗಳಲ್ಲಿ ಮೂರು ವಿಕೆಟ್ ಕಿತ್ತ ಅಶ್ವಿನ್ ಎದುರಾಳಿಗೆ ಎಚ್ಚರಿಕೆ ನೀಡಿದರು. ವಿಶೇಷವೆಂದರೆ  ಈ ಇನಿಂಗ್ಸ್ ನಲ್ಲಿ ಮೊದಲ ಟೆಸ್ಟ್ ನಲ್ಲಿ ಡಿಆರ್ ಎಸ್ ವಿವಾದಕ್ಕೆ ಕಾರಣವಾಗಿದ್ದ ದಿಲ್ರುವಾನ್ ವಿಕೆಟ್ ನ್ನು ಅಶ್ವಿನ್ ಎಲ್ ಬಿ ಮೂಲಕ ಪಡೆದರು. ಆದರೆ ಈ ಬಾರಿಯೂ ಡಿಆರ್ ಎಸ್ ಗೆ ಮನವಿ ಸಲ್ಲಿಸಿದ್ದ ದಿಲ್ರುವಾನ್ ಅದರಲ್ಲಿ ವಿಫಲರಾಗಿ ಪೆವಿಲಿಯನ್ ಸೇರಿಕೊಂಡರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ಮುಂದಿನ ಸುದ್ದಿ
Show comments