Webdunia - Bharat's app for daily news and videos

Install App

ಸಂಪ್ರದಾಯ ಮುರಿದು ವಿಶ್ವಕಪ್ ಟ್ರೋಫಿ ಹಸ್ತಾಂತರಿಸಿದ ಶ್ರೀನಿವಾಸನ್

Webdunia
ಸೋಮವಾರ, 30 ಮಾರ್ಚ್ 2015 (15:09 IST)
ಮಾಜಿ ಬಿಸಿಸಿಐ ಅಧ್ಯಕ್ಷ ಮತ್ತು ಪ್ರಸಕ್ತ ಐಸಿಸಿ ಚೇರ್‌ಮನ್ ಎನ್. ಶ್ರೀನಿವಾಸನ್ ಐಸಿಸಿ ಅಧ್ಯಕ್ಷ ಮುಸ್ತಫಾ ಕಮಲ್ ಅವರನ್ನು ಬದಿಗೊತ್ತಿ ವಿಶ್ವಕಪ್ ಟ್ರೋಫಿಯನ್ನು ನಾಯಕ ಮೈಕೇಲ್ ಕ್ಲಾರ್ಕ್ ಅವರಿಗೆ ಹಸ್ತಾಂತರಿಸಿದರು.  ಭಾರತದ ವಿರುದ್ಧ ಬಾಂಗ್ಲಾ ಪಂದ್ಯದಲ್ಲಿ ವಿವಾದಾತ್ಮಕ ಅಂಪೇರ್ ತೀರ್ಪುಗಳ ವಿರುದ್ಧ ಅಧ್ಯಕ್ಷ ಮುಸ್ತಾಫಾ ಕಮಲ್ ಆಕ್ರೋಶ ವ್ಯಕ್ತಪಡಿಸಿದ್ದರಿಂದ ಶ್ರೀನಿವಾಸನ್ ಅಸಮಾಧಾನಗೊಂಡಿದ್ದರು.

ಸಂಪ್ರದಾಯದ ಪ್ರಕಾರ, ಐಸಿಸಿ ಅಧ್ಯಕ್ಷ ಮುಸ್ತಫಾ ಕಮಲ್ ಟ್ರೋಫಿಯನ್ನು ನಾಯಕನಿಗೆ ಹಸ್ತಾಂತರಿಸಬೇಕಿತ್ತು. ಬಾಂಗ್ಲಾ ಮೂಲದವರಾದ ಕಮಲ್'' ಅಂಪೇರ್‌ಗಳು ಪಕ್ಷಪಾತ ಮಾಡಿದರು. ನಮ್ಮ ರಾಷ್ಟ್ರವನ್ನು ಪಂದ್ಯಾವಳಿಯಿಂದ ದೂಡುವ ಉದ್ದೇಶಪೂರ್ವಕ ಪ್ರಯತ್ನ ಎಂದು ಟೀಕಿಸಿದ್ದರು. ಮಾನವ ತಪ್ಪುಗಳು ಸಾಧ್ಯ. ಆದರೆ ಬಾಂಗ್ಲಾದೇಶದ ವಿರುದ್ಧ ಹತ್ತಾರು ತೀರ್ಪುಗಳು ಹೇಗೆ ಬರುತ್ತವೆ? ಇದು ನಿಜವಾಗಲೂ ಕಳಪೆ ಅಂಪೈರಿಂಗ್'' ಎಂದು ಕಿಡಿಕಾರಿದ್ದರು. 

 ಆದರೆ ಬಿಸಿಸಿಐ ಮತ್ತು ಐಸಿಸಿ ಮುಖ್ಯ ಎಕ್ಸಿಕ್ಯೂಟಿವ್ ಡೇವಿಡ್ ರಿಚರ್ಡ್‌ಸನ್ ಇಬ್ಬರೂ ಈ ಆರೋಪಗಳನ್ನು ತಳ್ಳಿಹಾಕಿದ್ದರು.  ಹಿಂದಿನ ವಿಶ್ವಕಪ್ ಆವೃತ್ತಿಗಳಲ್ಲಿ ವಿಜೇತ ನಾಯಕನಿಗೆ ಐಸಿಸಿ ಅಧ್ಯಕ್ಷರು ಟ್ರೋಫಿಯನ್ನು ಹಸ್ತಾಂತರಿಸುತ್ತಿದ್ದರು. 2011ರಲ್ಲಿ ಆಗಿನ ಅಧ್ಯಕ್ಷ ಶರದ್ ಪವಾರ್ ವಿಜೇತ ಭಾರತ ತಂಡದ ನಾಯಕ ಧೋನಿಗೆ ಟ್ರೋಫಿಯನ್ನು ಹಸ್ತಾಂತರಿಸಿದ್ದರು. 
 
 

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

Show comments