Webdunia - Bharat's app for daily news and videos

Install App

ಹೆಸರಿಗಷ್ಟೇ ಗವಾಸ್ಕರ್-ಬಾರ್ಡರ್ ಟ್ರೋಫಿ: ಭಾರತ-ಆಸ್ಟ್ರೇಲಿಯಾ ಸರಣಿ ಪ್ರಶಸ್ತಿ ಪ್ರಧಾನಕ್ಕೆ ಗವಾಸ್ಕರ್ ಆಹ್ವಾನವೇ ಇಲ್ಲ?!

Webdunia
ಬುಧವಾರ, 2 ಜನವರಿ 2019 (09:33 IST)
ಮುಂಬೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುವ ಟೆಸ್ಟ್ ಸರಣಿ ಆಸೀಸ್ ಕ್ರಿಕೆಟ್ ದಿಗ್ಗಜ ಅಲನ್ ಬಾರ್ಡರ್ ಮತ್ತು ಭಾರತೀಯ ದಿಗ್ಗಜ ಸುನಿಲ್ ಗವಾಸ್ಕರ್ ಗೌರವಾರ್ಥ ಬಾರ್ಡರ್-ಗವಾಸ್ಕರ್ ಸರಣಿ ಎಂದೇ ಕರೆಯಲ್ಪಡುತ್ತದೆ.


ಸಾಮಾನ್ಯವಾಗಿ ಈ ಸರಣಿ ಗೆದ್ದ ತಂಡಕ್ಕೆ ಈ ಇಬ್ಬರೂ ದಿಗ್ಗಜ ಕ್ರಿಕೆಟಿಗರು ಜತೆಯಾಗಿ ಸೇರಿಕೊಂಡು ಪ್ರಶಸ್ತಿ ಕೊಡುವುದು ಅಂದಿನಿಂದಲೂ ನಡೆದುಕೊಂಡ ಪದ್ಧತಿ. ಆದರೆ ಈ ಬಾರಿ ಸುನಿಲ್ ಗವಾಸ್ಕರ್ ಸಿಡ್ನಿಯಲ್ಲಿ ನಡೆಯಲಿರುವ ಅಂತಿಮ ಟೆಸ್ಟ್ ಮುಗಿದ ಬಳಿಕ ನಡೆಯಲಿರುವ ಪ್ರಶಸ್ತಿ ಸಮಾರಂಭಕ್ಕೆ ತೆರಳುತ್ತಿಲ್ಲ.

ಅದಕ್ಕೆ ಕಾರಣ, ಕ್ರಿಕೆಟ್ ಆಸ್ಟ್ರೇಲಿಯಾ ಸುನಿಲ್ ಗವಾಸ್ಕರ್ ಸೂಕ್ತ ಸಮಯಕ್ಕೆ ಆಹ್ವಾನ ಪತ್ರಿಕೆ ನೀಡದೇ ಇರುವುದು. ಒಂದು ವೇಳೆ ಸರಣಿ ಆರಂಭಕ್ಕೂ ಮೊದಲು ಆಹ್ವಾನ ಬಂದಿದ್ದರೆ ಅಲ್ಲಿಗೆ ತೆರಳುತ್ತಿದ್ದೆ. ಆದರೆ ಈಗ ಕಾಮೆಂಟೇಟರ್ ಕರ್ತವ್ಯವನ್ನೂ ನಿಭಾಯಿಸುತ್ತಿರುವುದರಿಂದ ಆ ಕರ್ತವ್ಯ ಬಿಟ್ಟು ಸಿಡ್ನಿಗೆ ಹೋಗಲು ಕಷ್ಟ. ಹೀಗಾಗಿ ಪ್ರಶಸ್ತಿ ಸಮಾರಂಭಕ್ಕೆ ಹೋಗುತ್ತಿಲ್ಲ ಎಂದು ಗವಾಸ್ಕರ್ ಹೇಳಿದ್ದಾರೆ. ಹೀಗಾಗಿ ಸಿಡ್ನಿಯಲ್ಲಿ ಸರಣಿ ಗೆದ್ದ ನಾಯಕನಿಗೆ ಅಲನ್ ಬಾರ್ಡರ್ ಏಕಾಂಗಿಯಾಗಿ ಟ್ರೋಫಿ ಹಸ್ತಾಂತರಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments