Webdunia - Bharat's app for daily news and videos

Install App

ಸರಣಿ ಗೆದ್ದ ಟೀಂ ಇಂಡಿಯಾಕ್ಕೆ ದುಡ್ಡು ಕೊಟ್ಟಿಲ್ಲ ಯಾಕೆ? ಆಸೀಸ್ ವಿರುದ್ಧ ಗವಾಸ್ಕರ್ ಗರಂ

Webdunia
ಭಾನುವಾರ, 20 ಜನವರಿ 2019 (09:16 IST)
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ಏಕದಿನ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಿಂದ ಗೆದ್ದು ಬೀಗಿದೆ. ಆದರೆ ಗೆದ್ದ ತಂಡಕ್ಕೆ ಬಹುಮಾನ ಮೊತ್ತ ಕೊಡದ ಆಸೀಸ್ ಕ್ರಿಕೆಟ್ ಮಂಡಳಿ ವಿರುದ್ಧ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಕಿಡಿ ಕಾರಿದ್ದಾರೆ.


ಏಕದಿನ ಸರಣಿ ಆಯೋಜಿಸಿ ಹಲವು ಮೂಲಗಳಿಂದ ಆಸ್ಟ್ರೇಲಿಯಾ ಕ್ರಿಕೆಟ್ ಮಂಡಳಿ ಸಾಕಷ್ಟು ಲಾಭ ಗಳಿಸಿರುತ್ತದೆ. ಆದರೆ ಗೆದ್ದ ತಂಡಕ್ಕೆ ಒಂದು ಟ್ರೋಫಿ ಮತ್ತು ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ ಪ್ರಶಸ್ತಿಯೆಂದು ಕೇವಲ 500 ಅಮೆರಿಕನ್ ಡಾಲರ್ ನೀಡಲಾಗಿದೆ.

ಸರಣಿ ಆಯೋಜಿಸಿ ಇಷ್ಟೆಲ್ಲಾ ಲಾಭ ಗಳಿಸುವುದಕ್ಕೆ ಕ್ರಿಕೆಟಿಗರು ಮುಖ್ಯ ಕಾರಣ. ಹಾಗಿರುವಾಗ ಅವರಿಗೆ ಕೇವಲ ಟ್ರೋಫಿ ಮಾತ್ರ ನೀಡಿದ್ದು ಯಾಕೆ? ನಗದು ಬಹುಮಾನವನ್ನು ಯಾಕೆ ನೀಡಿಲ್ಲ ಎಂದು ಗವಾಸ್ಕರ್ ಪ್ರಶ್ನಿಸಿದ್ದಾರೆ.

ಧೋನಿ ತಮಗೆ ಸಿಕ್ಕ ಸರಣಿ ಶ್ರೇಷ್ಠ ಪ್ರಶಸ್ತಿಯ ಹಣವನ್ನು ಚ್ಯಾರಿಟಿಯೊಂದಕ್ಕೆ ದಾನ ಮಾಡಿದ್ದರು. ಅದರ ಹೊರತಾಗಿ ತಂಡಕ್ಕೆ ಒಂದು ಟ್ರೋಫಿ ಮಾತ್ರ ನೀಡಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments