Webdunia - Bharat's app for daily news and videos

Install App

ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ಪಾಕ್ ಗೆ ನೆರವಾಗಿದ್ದ ರವಿಶಾಸ್ತ್ರಿ, ಸುನಿಲ್ ಗವಾಸ್ಕರ್

Webdunia
ಶನಿವಾರ, 14 ಅಕ್ಟೋಬರ್ 2017 (08:10 IST)
ನವದೆಹಲಿ: ಇತ್ತೀಚೆಗೆ ನಡೆದಿದ್ದ ಐಸಿಸಿ ಚಾಂಪಿಯನ್ಸ್ ಟ್ರೋಫಿಫೈನಲ್ ನಲ್ಲಿ ಟೀಂ ಇಂಡಿಯಾವನ್ನು ಸೋಲಿಸಿ ಪಾಕಿಸ್ತಾನ ಚಾಂಪಿಯನ್ ಆಗಿತ್ತು. ಇದಕ್ಕೆ ಕಾರಣ ಹಾಲಿ ಟೀಂ ಇಂಡಿಯಾ ಕೋಚ್ ರವಿ ಶಾಸ್ತ್ರಿ ಮತ್ತು ಬ್ಯಾಟಿಂಗ್ ದಂತಕತೆ ಸುನಿಲ್ ಗವಾಸ್ಕರ್ ರಂತೆ!

 
ಹಾಗಂತ ಅಂದು ಪಾಕ್ ತಂಡದ ಮ್ಯಾನೇಜರ್ ಆಗಿದ್ದ ಮಾಜಿ ಕ್ರಿಕೆಟಿಗ ತಲತ್ ಅಲಿ ಹೇಳಿಕೊಂಡಿದ್ದಾರೆ. ಪಾಕಿಸ್ತಾನವನ್ನು ಫೈನಲ್ ನಲ್ಲಿ ಗೆಲ್ಲಿಸಿದ್ದು ರವಿಶಾಸ್ತ್ರಿ ಮತ್ತು ಸುನಿಲ್ ಗವಾಸ್ಕರ್ ಎಂದು ಅವರು ಹೇಳಿದ್ದಾರೆ.

ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯಲ್ಲಿ ಇವರಿಬ್ಬರೂ ವೀಕ್ಷಕ ವಿವರಣೆ ಮಾಡುತ್ತಿದ್ದರು. ಆ ಸಂದರ್ಭದಲ್ಲಿ ರವಿಶಾಸ್ತ್ರಿ ಮತ್ತು ಗವಾಸ್ಕರ್ ಪಾಕಿಸ್ತಾನಕ್ಕೆ ಚಾಂಪಿಯನ್ ಆಗುವ ಯಾವುದೇ ಅವಕಾಶವಿಲ್ಲ ಎಂಬಂತೆ ಉಡಾಫೆಯಿಂದ ಮಾತನಾಡುತ್ತಿದ್ದರು.

ಇದನ್ನು ಕೇಳಿ ಪಾಕ್ ಆಟಗಾರರಿಗೆ ಉರಿದುಹೋಯ್ತಂತೆ. ಆದರೆ ಈ ಬಗ್ಗೆ ಪತ್ರಿಕಾ ಹೇಳಿಕೆ ಕೊಡುವುದರ ಬದಲು ಬ್ಯಾಟ್ ಮತ್ತು ಬೌಲ್ ನಿಂದಲೇ ಮಾತನಾಡೋಣ ಎಂದು ತೀರ್ಮಾನಿಸಿದೆವು. ಅದರಂತೆ ಆಡಿ ಗೆದ್ದೆವು ಎಂದು ತಲತ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments