Webdunia - Bharat's app for daily news and videos

Install App

ಭಾರತ-ಇಂಗ್ಲೆಂಡ್ ಟಿ20: ಸೋಲಿನ ನಡುವೆ ಹೊಳೆದ ‘ಸೂರ್ಯ’

Webdunia
ಸೋಮವಾರ, 11 ಜುಲೈ 2022 (08:10 IST)
ನ್ಯಾಟಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಮೂರನೇ ಟಿ20 ಪಂದ್ಯವನ್ನು ಟೀಂ ಇಂಡಿಯಾ ವೀರೋಚಿತವಾಗಿ 17 ರನ್ ಗಳಿಂದ ಸೋತಿದೆ.

ಆದರೆ ಈ ಪಂದ್ಯದಲ್ಲಿ ಹೈಲೈಟ್ ಆಗಿದ್ದ ಸೂರ್ಯಕುಮಾರ್ ಯಾದವ್ ಏಕಾಂಗಿ ಹೋರಾಟ. ಇಂಗ್ಲೆಂಡ್ ನೀಡಿದ್ದ 216 ರನ್ ಗಳ ಬೃಹತ್ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾಗೆ ಯಥಾವತ್ತು ಅಗ್ರ ಕ್ರಮಾಂಕದ ಬ್ಯಾಟಿಗರು ಕೈ ಕೊಟ್ಟರು. ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ತಲಾ 11 ರನ್ ಗಳಿಸಿ ಔಟಾದರು. ರಿಷಬ್ ಪಂತ್ ಕೇವಲ 1 ರನ್ ಗೆ ಪೆವಿಲಿಯನ್ ಗೆ ಸೇರಿಕೊಂಡರು.

ಈ ವೇಳೆ ಶ್ರೇಯಸ್ ಅಯ್ಯರ್ ಗೆ ಜೊತೆಯಾದ ಸೂರ್ಯಕುಮಾರ್ ಯಾದವ್ ಟೀಂ ಇಂಡಿಯಾಕ್ಕೆ ಗೆಲುವಿನ ಕನಸು ಚಿಗುರಿಸಿದರು. ಆದರೆ ಅಯ್ಯರ್ 28 ರನ್ ಗೆ ಔಟಾದಾಗ ಸೂರ್ಯ ಕುಮಾರ್ ಏಕಾಂಗಿ ಶೋ ನಡೆಸಬೇಕಾಯಿತು. ಕೇವಲ 55 ಎಸೆತಗಳಲ್ಲಿ ಭರ್ಜರಿ 117 ರನ್ ಗಳಿಸಿದ ಸೂರ್ಯಕುಮಾರ್ ಔಟಾಗುತ್ತಿದ್ದಂತೇ ಭಾರತದ ಸೋಲು ಖಚಿತವಾಯಿತು. ಒಂದು ವೇಳೆ ಸೂರ್ಯಗೆ ತಕ್ಕ ಸಾಥ್ ಸಿಗುತ್ತಿದ್ದರೆ ಭಾರತ ಈ ಪಂದ್ಯ ಗೆಲ್ಲುತ್ತಿತ್ತೇನೋ. ಆದರೆ ಕೊನೆಯಲ್ಲಿ ಭಾರತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 198 ರನ್ ಗಳಿಸಿ ಸೋಲೊಪ್ಪಿಕೊಂಡಿತು. ಆದರೆ ಕಳೆದ ಎರಡು ಪಂದ್ಯ ಗೆದ್ದಿದ್ದರಿಂದ 2-1 ಅಂತರದಿಂದ ಸರಣಿ ಟೀಂ ಇಂಡಿಯಾ ಕೈವಶವಾಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments