ಸೂರ್ಯಕುಮಾರ್ ಯಾದವ್ ವಿಸಿಟ್ ಮಾಡಿದ ಉಡುಪಿಯ ಈ ವಿಶೇಷ ಬಂಗಲೆ ಯಾವುದು ಹೇಳಿ ನೋಡೋಣ

Krishnaveni K
ಬುಧವಾರ, 10 ಜುಲೈ 2024 (09:27 IST)
Photo Credit: Instagram
ಉಡುಪಿ: ಪತ್ನಿಯ ತವರು ಉಡುಪಿ-ಮಂಗಳೂರಿಗೆ ಬಂದಿರುವ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ವಿಶೇಷ ಜಾಗವೊಂದಕ್ಕೆ ಭೇಟಿ ನೀಡಿದ್ದಾರೆ. ಆ ಜಾಗದ ಫೋಟೋವನ್ನೂ ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಅಷ್ಟಕ್ಕೂ ಆ ಜಾಗದ ವಿಶೇಷತೆ ಏನು ಗೊತ್ತಾ?

ಸೂರ್ಯಕುಮಾರ್ ಪತ್ನಿ ದೇವಿಶಾ ಶೆಟ್ಟಿ ಮೂಲತಃ ಕರಾವಳಿಯವರು. ತಮ್ಮ ತವರಿಗೆ ಪತಿಯನ್ನು ಕರೆದುಕೊಂಡು ದೇವಿಶಾ ಬಂದಿದ್ದಾರೆ. ಜೊತೆಗೆ ಉಡುಪಿಯ ಮಾರಿಗುಡಿ ಕಾಪಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದರು. ವಿವಾಹ ವಾರ್ಷಿಕೋತ್ಸವದ ಸಂದರ್ಭದಲ್ಲೇ ಸೂರ್ಯಕುಮಾರ್ ದಂಪತಿ ಕರಾವಳಿಗೆ ಭೇಟಿ ನೀಡಿದ್ದು ವಿಶೇಷ.

ಸದ್ಯಕ್ಕೆ ಕ್ರಿಕೆಟ್ ನಿಂದ ಬಿಡುವು ಪಡೆದಿರುವ ಸೂರ್ಯಕುಮಾರ್ ಯಾದವ್ ಕರಾವಳಿಯ ಸುಂದರ ಪರಿಸರದಲ್ಲಿ ಅಡ್ಡಾಡುತ್ತಿದ್ದಾರೆ. ಅದರಲ್ಲೂ ಅವರ ಸೋಷಿಯಲ್ ಮೀಡಿಯಾದಲ್ಲಿ ಉಡುಪಿಯ ವಿಶೇಷ ಹೆರಿಟೇಜ್ ಬಂಗಲೆಯೊಂದನ್ನು ಹಂಚಿಕೊಂಡಿದ್ದಾರೆ. ಈ ಬಂಗಲೆಯನ್ನು ನಿಮಗೂ ಎಲ್ಲೋ ನೋಡಿದಂತಾಗಬಹುದು.

ಇದು ಉಡುಪಿಯ ಮುಳೂರಿನಲ್ಲಿರುವ ಸಾಯಿ ರಾಧಾ ಹೆರಿಟೇಜ್ ಬಂಗಲೆಯಾಗಿದೆ. ಈ ಬಂಗಲೆಯಲ್ಲೇ ಕಾಂತಾರ ಸಿನಿಮಾದ ಆರಂಭದಲ್ಲಿ ಬರುವ ಅರಮನೆ ಭಾಗದ ಚಿತ್ರೀಕರಣವಾಗಿತ್ತು. ಇದನ್ನು ಸೂರ್ಯ ಕೂಡಾ ಗುರುತಿಸಿದ್ದಾರೆ. ಇದನ್ನು ನೆನಪಿಸಿಕೊಂಡು ಫೋಟೋ ಹಂಚಿಕೊಂಡಿರುವ ಸೂರ್ಯ ಇದು ಕಾಂತಾರ ಮನೆ ಎಂದು ಸ್ಟೇಟಸ್ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments