Webdunia - Bharat's app for daily news and videos

Install App

ಸಂಜು ಸ್ಯಾಮ್ಸನ್ ಗಾಗಿ ಮೈದಾನದಲ್ಲೂ ಎದುರಾಳಿಗಳ ಜೊತೆ ಸೂರ್ಯಕುಮಾರ್ ಯಾದವ್ ಕಿತ್ತಾಟ

Krishnaveni K
ಶನಿವಾರ, 9 ನವೆಂಬರ್ 2024 (11:14 IST)
Photo Credit: X
ಡರ್ಬನ್: ಸಂಜು ಸ್ಯಾಮ್ಸನ್ ಗೆ ಟೀಂ ಇಂಡಿಯಾ ಟಿ20 ಫಾರ್ಮ್ಯಾಟ್ ನಲ್ಲಿ ಅವಕಾಶ ನೀಡಲು ಕ್ಯಾಪ್ಟನ್ ಸೂರ್ಯಕುಮಾರ್ ಯಾದವ್ ಅವರೇ ಕಾರಣ. ಈಗ ಸಂಜು ಸ್ಯಾಮ್ಸನ್ ಗಾಗಿ ಮೈದಾನದಲ್ಲೂ ಎದುರಾಳಿ ಆಟಗಾರರೊಂದಿಗೆ ಕಿತ್ತಾಟವಾಡಿದ ಪ್ರಸಂಗ ನಡೆದಿದೆ.

ನಾಯಕನಾಗಿ ಸೂರ್ಯಕುಮಾರ್ ಯಾದವ್ ಕೂಲ್ ಆಗಿಯೇ ಇದುವರೆಗೆ ಎಲ್ಲರ ಗಮನ ಸೆಳೆದಿದ್ದಾರೆ. ಆದರೆ ನಿನ್ನೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಮಾತ್ರ ಎದುರಾಳಿ ಆಟಗಾರ ಜೇನ್ ಸನ್ ಜೊತೆ ವಾಗ್ವಾದಕ್ಕಿಳಿದರು. ಅದೂ ವಿಕೆಟ್ ಕೀಪಿಂಗ್ ಮಾಡುತ್ತಿದ್ದ ಸಂಜು ಸ್ಯಾಮ್ಸನ್ ಪರವಾಗಿ.

ದ ಆಫ್ರಿಕಾ ಇನಿಂಗ್ಸ್ ನ 15.3 ನೇ ಓವರ್ ನಲ್ಲಿ ಘಟನೆ ನಡೆದಿದೆ. ಬ್ಯಾಟಿಂಗ್ ಮಾಡುತ್ತಿದ್ದ ಜೇನ್ ಸನ್ ಭಾರತದ ವಿಕೆಟ್ ಕೀಪರ್ ಸಂಜು ಸ್ಯಾಮ್ಸನ್ ವರ್ತನೆ ಬಗ್ಗೆ ತಗಾದೆ ತೆಗೆದಿದ್ದಾರೆ. ವಿಕೆಟ್ ಕೀಪಿಂಗ್ ಮಾಡುತ್ತಿದ್ದ ಸಂಜು ಪದೇ ಪದೇ ಪಿಚ್ ಗೆ ಬಂದು ಬಾಲ್ ಕಲೆಕ್ಟ್ ಮಾಡುತ್ತಿದ್ದರು ಎಂಬುದು ಅವರ ಆಕ್ಷೇಪವಾಗಿತ್ತು.

ಆದರೆ ಜೇನ್ ಸನ್ ತಡೆ ಮಾಡುತ್ತಿದ್ದುದರಿಂದಲೇ ಸಂಜು ಅನಿವಾರ್ಯವಾಗಿ ಪಿಚ್ ನಲ್ಲಿ ಕಾಲು ಇಡುತ್ತಿದ್ದರು ಎಂದು ಭಾರತೀಯ ಆಟಗಾರರ ವಾದವಾಗಿತ್ತು. ಸಂಜು ವರ್ತನೆ ಪ್ರಶ್ನೆ ಮಾಡಿದ್ದಕ್ಕೆ ಸೂರ್ಯಕುಮಾರ್ ಯಾದವ್ ಎದುರಾಳಿ ಬ್ಯಾಟಿಗರ ಜೊತೆ ವಾಗ್ವಾದವನ್ನೇ ನಡೆಸಿದರು. ಬಳಿಕ ಅಂಪಾಯರ್ ಮಧ್ಯಪ್ರವೇಶಿಸಿದರು. ಈ ವೇಳೆ ಸೂರ್ಯ ಅಂಪಾಯರ್ ಗೂ ವಾಸ್ತವ ಸ್ಥಿತಿ ಮನವರಿಕೆ ಮಾಡಿಕೊಟ್ಟರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments