Webdunia - Bharat's app for daily news and videos

Install App

ಕ್ಯಾಪ್ಟನ್ ಆದ ಬೆನ್ನಲ್ಲೇ ವಿಶೇಷ ಪೋಸ್ಟ್ ಹಂಚಿಕೊಂಡ ಸೂರ್ಯಕುಮಾರ್ ಯಾದವ್

Krishnaveni K
ಶನಿವಾರ, 20 ಜುಲೈ 2024 (14:50 IST)
ಮುಂಬೈ: ಟೀಂ ಇಂಡಿಯಾ ಟಿ20 ತಂಡದ ನಾಯಕರಾಗಿ ಆಯ್ಕೆಯಾಗಿರುವ ಸೂರ್ಯಕುಮಾರ್ ಯಾದವ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ವಿಶೇಷ ಸಂದೇಶ ಬರೆಯುವ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.

ರೋಹಿತ್ ಶರ್ಮಾ ನಿವೃತ್ತಿ ಬಳಿಕ ಟಿ20 ಕ್ರಿಕೆಟ್ ಗೆ ಭಾರತ ತಂಡದ ನಾಯಕತ್ವ ಯಾರ ಹೆಗಲಿಗೇರಬಹುದು ಎಂಬ ಕುತೂಹಲವಿತ್ತು. ಹಾರ್ದಿಕ್ ಪಾಂಡ್ಯ ನಾಯಕರಾಗಬಹುದು ಎಂಬುದು ಎಲ್ಲರ ಲೆಕ್ಕಾಚಾರವಾಗಿತ್ತು. ಆದರೆ ಕೊನೆಯ ಕ್ಷನದಲ್ಲಿ ರೇಸ್ ನಲ್ಲಿ ಸೂರ್ಯಕುಮಾರ್ ಎಂಟ್ರಿಯಾಗಿತ್ತು.

ಇದಕ್ಕೆ ತಂಡದ ಆಟಗಾರರ ಅಭಿಪ್ರಾಯವೂ ಮುಖ್ಯವಾಗಿತ್ತು ಎನ್ನಲಾಗಿದೆ. 33 ವರ್ಷದ ಸೂರ್ಯಕುಮಾರ್ ಯಾದವ್ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇದಾದ ಬಳಿಕ ಇದೇ ಮೊದಲ ಬಾರಿಗೆ ಸೂರ್ಯ ಈ ಬಗ್ಗೆ ಮನಬಿಚ್ಚಿ ಮಾತನಾಡಿದ್ದಾರೆ. ತಮಗೆ ಬೆಂಬಲ ನೀಡಿದವರಿಗೆ ಸೋಷಿಯಲ್ ಮೀಡಿಯಾದಲ್ಲಿ ಧನ್ಯವಾದ ಸಲ್ಲಿಸಿದ್ದಾರೆ.

‘ನಿಮ್ಮೆಲ್ಲಾ ಪ್ರೀತಿ, ಹಾರೈಕೆಗಳಿಗೆ ತುಂಬಾ ಧನ್ಯವಾದಗಳು. ಕಳೆದ ಕೆಲವು ವಾರಗಳು ಕನಸಿನಂತೆ ಭಾಸವಾಗಿದ್ದವು ಮತ್ತು ಅದಕ್ಕೆ ನಾನು ಆಭಾರಿಯಾಗಿದ್ದೇನೆ. ದೇಶಕ್ಕಾಗಿ ಆಡುವುದು ನನ್ನ ದೊಡ್ಡ ಕನಸು ಮತ್ತು ಅದನ್ನು ನಾನು ಪದಗಳಲ್ಲಿ ವರ್ಣಿಸಲು ಸಾಧ್ಯವಿಲ್ಲ. ಈ ಹೊಸ ಜವಾಬ್ಧಾರಿ ಹೊಸ ಅನುಭವ, ಖುಷಿ ತಂದಿದೆ. ನಿಮ್ಮ ಈ ಬೆಂಬಲ ಮುಂದೆಯೂ ಮುಂದುವರಿಯಲಿದೆ ಎಂದು ಭಾವಿಸಿದ್ದೇನೆ. ಎಲ್ಲವೂ ದೇವರಿಗೇ ಬಿಟ್ಟಿದ್ದು, ದೇವರು ದೊಡ್ಡವನು’ ಎಂದು ಸೂರ್ಯ ಬರೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments