Webdunia - Bharat's app for daily news and videos

Install App

ಸಿಡ್ನಿಯಲ್ಲಿ ಇತಿಹಾಸ ಬರೆದ ವಿರಾಟ್ ಕೊಹ್ಲಿ: ಬಾರ್ಡರ್-ಗವಾಸ್ಕರ್ ಟ್ರೋಫಿ ಟೀಂ ಇಂಡಿಯಾ ವಶ

Webdunia
ಸೋಮವಾರ, 7 ಜನವರಿ 2019 (09:43 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕನೇ ಟೆಸ್ಟ್ ಪಂದ್ಯದ ಅಂತಿಮ ದಿನದಾಟ ಮಳೆಯಿಂದಾಗಿ ರದ್ದಾಗುವುದರೊಂದಿಗೆ ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದ್ದು, 2-1 ರಿಂದ ಟೀಂ ಇಂಡಿಯಾ ಸರಣಿ ಗೆದ್ದು ಇತಿಹಾಸ ನಿರ್ಮಿಸಿದೆ.


ಭಾರೀ ಮಳೆಯಿಂದಾಗಿ ಇಂದು ಒಂದೇ ಒಂದು ಎಸೆತವೂ ಸಾಧ್ಯವಾಗಿರಲಿಲ್ಲ. ಹೀಗಾಗಿ ಭಾರತ 2-1 ರಿಂದ ಸರಣಿ ಗೆದ್ದುಕೊಂಡಿತು. ಇದರೊಂದಿಗೆ ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಸರಣಿ ಗೆದ್ದ ಮೊದಲ ಭಾರತೀಯ ಮಾತ್ರವಲ್ಲ, ಏಷ್ಯಾ ಖಂಡದ ಮೊದಲ ನಾಯಕ ಎಂಬ ಖ್ಯಾತಿಗೆ ವಿರಾಟ್ ಪಾತ್ರರಾದರು.

ಈ ಸರಣಿಯುದ್ದಕ್ಕೂ ಅತ್ಯುತ್ತಮ ಪ್ರದರ್ಶನ ನೀಡಿದ ಚೇತೇಶ್ವರ ಪೂಜಾರ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠರಾಗಿ ಹೊರಹೊಮ್ಮಿದರು. ಆಸ್ಟ್ರೇಲಿಯಾ ದಿಗ್ಗಜ ಅಲನ್ ಬಾರ್ಡರ್ ಕೈಯಿಂದ ಪ್ರಶಸ್ತಿ ಸ್ವೀಕರಿಸಿದ ನಾಯಕ ಕೊಹ್ಲಿ ತಂಡದ ಅತ್ಯಂತ ಹೊಸ ಆಟಗಾರ ಮಯಾಂಕ್ ಅಗರ್ವಾಲ್ ಕೈಗೆ ಟ್ರೋಫಿ ಒಪ್ಪಿಸಿ ಸಂಭ್ರಮಿಸಿದರು. ಭಾರತದ ಪಾಲಿಗೆ ಈ ಸರಣಿ ಸ್ಮರಣೀಯವಾಗಿತ್ತು. ಅಷ್ಟೇ ಅಲ್ಲ, ಈ ಸರಣಿ ಗೆಲುವಿನೊಂದಿಗೆ ಟೆಸ್ಟ್ ಕ್ರಿಕೆಟ್ ನಲ್ಲಿ ನಂ.1 ಸ್ಥಾನವನ್ನು ಭದ್ರಪಡಿಸಿಕೊಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಪಾಕಿಸ್ತಾನ ಕ್ರಿಕೆಟಿಗರ ಚಾನೆಲ್ ಭಾರತದಲ್ಲಿ ಒಮ್ಮೆ ಆನ್, ಮತ್ತೆ ಆಫ್

ಮುಂದಿನ ಸುದ್ದಿ
Show comments