Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಬದ್ಧತೆ ಬಗ್ಗೆ ವಿಶೇಷ ವಿಚಾರ ಹೊರಹಾಕಿದ ಫೀಲ್ಡಿಂಗ್ ಕೋಚ್ ಟಿ ದಿಲೀಪ್

Krishnaveni K
ಶುಕ್ರವಾರ, 19 ಜನವರಿ 2024 (10:07 IST)
ಬೆಂಗಳೂರು: ಅಫ್ಘಾನಿಸ್ತಾನ ವಿರುದ್ಧ ಟಿ20 ಸರಣಿಯಲ್ಲಿ ಟೀಂ ಇಂಡಿಯಾದ ಫೀಲ್ಡರ್ ಆಫ್ ದಿ ಸೀರೀಸ್ ಅವಾರ್ಡ್ ನ್ನು ಈ ಬಾರಿ ವಿರಾಟ್ ಕೊಹ್ಲಿ ಪಡೆದುಕೊಂಡಿದ್ದಾರೆ.

ಟಿ. ದಿಲೀಪ್ ಟೀಂ ಇಂಡಿಯಾ ಕೋಚ್ ಆದ ಮೇಲೆ ತಂಡದಲ್ಲಿ ಅತ್ಯುತ್ತಮ ಫೀಲ್ಡರ್  ನ್ನು ಗುರುತಿಸಿ ಮೆಡಲ್ ನೀಡಲಾಗುತ್ತಿದೆ. ಅದರಂತೆ ಈ ಸರಣಿಯಲ್ಲಿ ಯುವ ಕ್ರಿಕೆಟಿಗರ ನಡುವೆ ಕೊಹ್ಲಿ ಬೆಸ್ಟ್ ಫೀಲ್ಡರ್ ಅವಾರ್ಡ್ ಪಡೆದುಕೊಂಡಿದ್ದಾರೆ.

ಬೆಂಗಳೂರಿನಲ್ಲಿ ನಡೆದಿದ್ದ ಕೊನೆಯ ಪಂದ್ಯದಲ್ಲಿ ಯುವ ಕ್ರಿಕೆಟಿಗರೂ ನಾಚುವಂತೆ ಬೌಂಡರಿ ಲೈನ್ ಬಳಿ ಚಿಗರೆಯಂತೆ ಹಾರಿ ಬಾಲ್ ತಡೆದಿದ್ದು ಎಲ್ಲೆಡೆ ವೈರಲ್ ಆಗಿತ್ತು. ಈ ಸರಣಿಯಲ್ಲಿ ಬ್ಯಾಟ್ ನಿಂದ ಕೊಹ್ಲಿ ಹೆಚ್ಚು ಕೊಡುಗೆ ನೀಡಿಲ್ಲವಾದರೂ ಫೀಲ್ಡಿಂಗ್ ನಿಂದ ಗಮನ ಸೆಳೆದಿದ್ದರು.

ಇದೀಗ ಕೊಹ್ಲಿಗೆ ಬೆಸ್ಟ್ ಫೀಲ್ಡರ್ ಅವಾರ್ಡ್ ಘೋಷಣೆ ಮಾಡುವಾಗ ಕೋಚ್ ದಿಲೀಪ್ ಇನ್ನೊಂದು ವಿಶಿಷ್ಟ ವಿಚಾರವನ್ನು ಹೊರಹಾಕಿದ್ದಾರೆ. ‘ಕೊಹ್ಲಿ ಸದಾ ತಮ್ಮನ್ನು ತಾವು ಪರೀಕ್ಷೆಗೊಳಪಡಿಸಲು ಬಯಸುತ್ತಾರೆ. ವಿಶ್ವಕಪ್ ಸಂದರ್ಭದಲ್ಲಿ ಎರಡು ಬಾರಿ ಅವರು ಬೆಸ್ಟ್ ಫೀಲ್ಡರ್ ಪದಕ ಗೆದ್ದಿದ್ದರು. ನನಗೆ ಇನ್ನೂ ನೆನಪಿದೆ, ವೆಸ್ಟ್ ಇಂಡೀಸ್ ಸರಣಿಯಲ್ಲಿ ಕೊಹ್ಲಿ ನನ್ನ ಬಳಿ ನಾನು ಸ್ಲಿಪ್ ನಲ್ಲಿ ಫೀಲ್ಡಿಂಗ್ ಮಾಡಲ್ಲ. ನನ್ನನ್ನು ನಾನು ಪರೀಕ್ಷೆಗೊಳಪಡಿಸಲು ಶಾರ್ಟ್ ಲೆಗ್ ಅಥವಾ ಸಿಲ್ಲಿ ಪಾಯಿಂಟ್ ನಂತಹ ಕಷ್ಟದ ಜಾಗದಲ್ಲಿ ಫೀಲ್ಡಿಂಗ್ ಮಾಡಲು ಅವಕಾಶ ಕೊಡಿ ಎಂದು ಕೇಳಿದ್ದರು. ಅವರ ಬದ್ಧತೆ ಯುವ ಕ್ರಿಕೆಟಿಗರಿಗೆ ಸ್ಪೂರ್ತಿಯಾಗಬೇಕು. ನೀವು ಅವರ ಜೊತೆ ಆಡುತ್ತಿರುವುದೇ ನಿಮ್ಮ ಅದೃಷ್ಟ’ ಎಂದು ಯುವ ಕ್ರಿಕೆಟಿಗರಿಗೆ ದಿಲೀಪ್ ವಿವರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಚೆಸ್ ವಿಶ್ವ ಕಪ್ ಗೆದ್ದು ಚಾರಿತ್ರಿಕ ಸಾಧನೆ ಮೆರೆದ ಭಾರತದ ದಿವ್ಯಾ ದೇಶ್‌ಮುಖ್‌

ರಿಷಭ್ ಪಂತ್ ಎದೆಗಾರಿಕೆ, ವ್ಯಕ್ತಿತ್ವ ಮುಂದಿನ ಪೀಳಿಗೆಗೂ ಸ್ಫೂರ್ತಿ: ಗೌತಮ್ ಗಂಭೀರ್ ಬಿಚ್ಚುಮಾತು

ನಿಮ್ಗೆ ಸ್ವಿಂಗ್ ಆಡುವ ಯೋಗ್ಯತೆ ಇಲ್ಲ ಎಂದ ಹ್ಯಾರಿ ಬ್ರೂಕ್ ಗೆ ಕೆಎಲ್ ರಾಹುಲ್ ಉತ್ತರ ಏನಿತ್ತು ಗೊತ್ತಾ

Video: ಡ್ರಾ ಮಾಡಿಕೊಳ್ಳೋಣ್ವಾ ಎಂದರೆ ತಡಿ ಸೆಂಚುರಿ ಮಾಡ್ತೀನಿ ಎಂದ ರವೀಂದ್ರ ಜಡೇಜಾ

ಕಾಲಿನ ಬೆರಳು ಮುರಿದರೂ ಮತ್ತೆ ಕಣಕ್ಕೆ ಇಳಿಯಲು ಸಜ್ಜಾದ ರಿಷಭ್‌ ಪಂತ್‌: ಕುತೂಹಲ ಘಟ್ಟದತ್ತ ನಾಲ್ಕನೇ ಟೆಸ್ಟ್‌

ಮುಂದಿನ ಸುದ್ದಿ
Show comments