ಟಿ20 ವಿಶ್ವಕಪ್: ಹೀನಾಯ ಸೋಲಿನೊಂದಿಗೆ ಕೂಟದಿಂದ ಹೊರಬಿದ್ದ ಟೀಂ ಇಂಡಿಯಾ

Webdunia
ಗುರುವಾರ, 10 ನವೆಂಬರ್ 2022 (17:02 IST)
Photo Courtesy: Twitter
ಅಡಿಲೇಡ್: ಟಿ20 ವಿಶ್ವಕಪ್ ನಲ್ಲಿ ಇಂದು ಇಂಗ್ಲೆಂಡ್ ವಿರುದ್ಧ 10 ವಿಕೆಟ್ ಗಳಿಂದ ಹೀನಾಯ ಸೋಲು ಕಾಣುವುದರೊಂದಿಗೆ ಟೀಂ ಇಂಡಿಯಾ ಕೂಟದಿಂದ ಹೊರಬಿದ್ದಿದೆ.

ಟಾಸ್ ಸೋತಿದ್ದೇ ನಿರ್ಣಾಯಕವಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಭಾರತಕ್ಕೆ ಎಂದಿನಂತೆ ಆರಂಭಿಕರು ಕೈಕೊಟ್ಟರು. ವಿರಾಟ್ ಕೊಹ್ಲಿ 50, ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಬಿರುಸಿನ 63 ರನ್ ಗಳಿಸಿದ್ದರಿಂದ ಭಾರತದ ಮೊತ್ತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 168 ಆಗಿತ್ತು.

ಈ ಮೊತ್ತ ಬೆನ್ನತ್ತಿದ್ದ ಇಂಗ್ಲೆಂಡ್ ಗೆ ಭಾರತೀಯ ಬೌಲರ್ ಗಳು ಯಾವುದೇ ಹಂತದಲ್ಲೂ ಸವಾಲಾಗಲೇ ಇಲ್ಲ. ಜೋಸ್ ಬಟ್ಲರ್-ಅಲೆಕ್ಸ್ ಹೇಲ್ಸ್ ಜೋಡಿ ಮನಸೋ ಇಚ್ಛೆ ದಂಡಿಸಿ 16 ಓವರ್ ಗಳಲ್ಲೇ ಒಂದೇ ಒಂದು ವಿಕೆಟ್ ಕಳೆದುಕೊಳ್ಳದೇ 170 ರನ್ ಗಳಿಸಿ ತಂಡಕ್ಕೆ ಗೆಲುವು ಕೊಡಿಸಿದರು. ಬಟ್ಲರ್ ಅಜೇಯ 80, ಅಲೆಕ್ಸ್ ಅಜೇಯ 86 ರನ್ ಗಳಿಸಿದರು. ಭಾರತೀಯ ಬೌಲರ್ ಗಳ ಪೈಕಿ ಭುವನೇಶ್ವರ್ ಕುಮಾರ್ 2 ಓವರ್ ಗಳಲ್ಲಿ 25 ರನ್ ನೀಡಿದರೆ ರವಿಚಂದ್ರನ್ ಅಶ್ವಿನ್ 2 ಓವರ್ ಗಳಲ್ಲಿ 27 ರನ್ ಬಿಟ್ಟುಕೊಟ್ಟು ದುಬಾರಿ ಎನಿಸಿದರು. ಯಾರೊಬ್ಬರನ್ನೂ ಬಿಡದೇ ದಂಡಿಸಿದ ಇಂಗ್ಲೆಂಡ್ ಬ್ಯಾಟಿಗರು ಟೀಂ ಇಂಡಿಯಾಗೆ ಮುಖಭಂಗ ಮಾಡಿದ್ದಾರೆ. ಇದರೊಂದಿಗೆ ಇಂಗ್ಲೆಂಡ್ ಪಾಕಿಸ್ತಾನ ವಿರುದ್ಧ ಫೈನಲ್ಸ್ ನಲ್ಲಿ ಆಡುವಂತಾಗಿದೆ. ಭಾರತ-ಪಾಕ್ ಫೈನಲ್ ಆಡುತ್ತದೆ ಎಂಬ ಕನಸು ಕನಸಾಗಿಯೇ ಉಳಿಯಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments